ದತ್ತಜಯಂತಿಯಲ್ಲಿ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು ಭಾಗಿಯಾಗುವ ಸಾಧ್ಯತೆ

ಚಿಕ್ಕಮಗಳೂರು(ಅ.30):  ಜಿಲ್ಲೆಯ ವಿವಾದಿತ ಇನಾಂ ದತ್ತಾತ್ರೇಯ ಪೀಠದಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 12 ದಿನಗಳವರೆಗೆ 12 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಈ ಸಂದರ್ಭದಲ್ಲಿ ವಿವಾದಿತ ದತ್ತಾತ್ರೇಯ ಗುಹೆಯ ಮುಂಭಾಗ ಹೋಮ ಪೂಜೆ ಮಾಡುವುದಾಗಿ ಭಜರಂಗದಳ ಕರೆ ನೀಡಿದೆ. 

Add Asianetnews Kannada as a Preferred SourcegooglePreferred

ವಿಶ್ವ ಹಿಂದೂ ಷರಿಷತ್, ಭಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ನಡೆಯಲಿದೆ. ದತ್ತ ಪೀಠದ ತಾತ್ಕಾಲಿಕ ಶೆಡ್‌ನಲ್ಲಿ‌ ಮುಸ್ಲಿಂರು ಮಾಂಸಹಾರ ಸೇವನೆ ಮಾಡಿರುವ ಹಿನ್ನೆಲೆಯಲ್ಲಿ ವಿವಾದಿತ ಪ್ರದೇಶದಲ್ಲೇ ಹೋಮ ಮಾಡುವುದಾಗಿ ಭಜರಂಗದಳ ಘೋಷಿಸಿದೆ. 

ಗ್ರಾಪಂ ಸದಸ್ಯ- ಪಿಡಿಓ ಮಾರಾಮಾರಿ: ಠಾಣೆ ಎದುರು ಕಾಂಗ್ರೆಸ್‌ ಪ್ರತಿಭಟನೆ

ನವೆಂಬರ್ 28 ರಿಂದ ಡಿಸೆಂಬರ್ 12 ದಿನಗಳವರೆಗೂ ದತ್ತಜಯಂತಿ ನಡೆಯಲಿದೆ. ದತ್ತಜಯಂತಿಯಲ್ಲಿ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು ಭಾಗಿಯಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ದತ್ತಜಯಂತಿ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್ ಆಗಿದ್ದಾರೆ.