ಮಾಸ್ಕೋದಿಂದ ದೆಹಲಿಗೆ ವಂದೇ ಮಾತರಂ ಮಿಷಿನ್‌ ವಿಮಾನದಲ್ಲಿ ಈ ಎಲ್ಲಾ 110 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬರಲು ಅವಕಾಶ ಸಿಗಲಿಲ್ಲ| ಸಂಸದ ಸಿದ್ದೇಶ್ವರ್‌ಗೆ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಬೆಂಗಳೂರಿಗೆ ಬಂದಿಳಿಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದ ವಿದ್ಯಾರ್ಥಿಗಳು|

ದಾವಣಗೆರೆ(ಜು.13): ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 110 ವಿದ್ಯಾರ್ಥಿಗಳು ತಾಯ್ನಾಡಿಗೆ ಬರಲು ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ಮಾಡಿದ ಮನವಿಗೆ ಸಂಸದ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್‌ ಸ್ಪಂದಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಸ್ಕೋದಿಂದ ದೆಹಲಿಗೆ ವಂದೇ ಮಾತರಂ ಮಿಷಿನ್‌ ವಿಮಾನದಲ್ಲಿ ಈ ಎಲ್ಲಾ 110 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬರಲು ಅವಕಾಶ ಸಿಗಲಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು ಸಂಸದ ಸಿದ್ದೇಶ್ವರ್‌ಗೆ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಬೆಂಗಳೂರಿಗೆ ಬಂದಿಳಿಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದರು.

ವೈರಸ್‌ ಹಾವಳಿ, ಸದ್ಯ ಮಠ-ಮಂದಿರಕ್ಕೆ ಬರಬೇಡಿ..!

ವೈದ್ಯ ವಿದ್ಯಾರ್ಥಿಗಳ ಮನವಿಗೆ ಸ್ಪಂದಸಿದ ಸಂಸದ ಜಿ.ಎಂ.ಸಿದ್ದೇಶ್ವರ್‌ ಜುಲೈ 1ರಂದು ವಿದೇಶಾಂಗ ಸಚಿವ ಜೈಶಂಕರ್‌, ವಿಮಾನಯಾನ ಸಚಿವ ಹರದೀಪ್‌ ಸಿಂಗ್‌ಪುರಿಗೆ ಪತ್ರ ಬರೆದು ಮತ್ತು ಟ್ವೀಟ್‌ ಮೂಲಕವೂ ಗಮನ ಸೆಳೆದಿದ್ದರು. ಸಿದ್ದೇಶ್ವರ್‌ ಮನವಿಗೆ ಸ್ಪಂದಿಸಿದ ಸಚಿವ ಜೈಶಂಕರ್‌ ಈ ಎಲ್ಲಾ ವಿದ್ಯಾರ್ಥಿಗಳು ರಷ್ಯಾದ ಮಾಸ್ಕೋದಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬರಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳು ಜು.13ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದರಲ್ಲಿ 11 ಜನ ದಾವಣಗೆರೆ ಜಿಲ್ಲೆಯವರಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸಿದ್ದೇಶ್ವರ್‌ ಮತ್ತು ಕೇಂದ್ರ ಸಚಿವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.