ಹಾವೇರಿ ಜಿಲ್ಲೆಯಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ರೀತಿಯಿಂದ ಸೇವೆ| ಶ್ರೀಮಠವು ಅವರ ಕಾರ್ಯವನ್ನು ಗುರುತಿಸಿ ನೆರವು ನೀಡುತ್ತಿರುವುದು ಒಳ್ಳೆಯ ನಡೆಯಾಗಿದೆ ಎಂದ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ|

ರಾಣಿಬೆನ್ನೂರು(ಮೇ.17): ವಿದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದ್ದಾರೆ. ತಾಲೂಕಿನ ಅರೇಮಲ್ಲಾಪುರ ಗ್ರಾಮದ ಶರಣ ಬಸವೇಶ್ವರ ಮಠದಲ್ಲಿ ಶನಿವಾರ ಶ್ರೀಮಠದ ವತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಪತ್ರಕರ್ತರಿಗೆ ಕೊಡಮಾಡಿದ ಆಹಾರ ಧಾನ್ಯ ಕಿಟ್‌ ವಿತರಿಸಿ ಸನ್ಮಾನಿ ಮಾತನಾಡಿದರು.

"

ಕೊರೋನಾ ಸಂಕಷ್ಟ: ಕೂಲಿ ಮಾಡಲು ಮುಂದಾದ ಪದವೀಧರೆ..!

ಜಿಲ್ಲೆಯಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ರೀತಿಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಮಠವು ಅವರ ಕಾರ್ಯವನ್ನು ಗುರುತಿಸಿ ನೆರವು ನೀಡುತ್ತಿರುವುದು ಒಳ್ಳೆಯ ನಡೆಯಾಗಿದೆ ಎಂದರು.<br/>ಶ್ರೀಮಠದ ಡಾ. ಪ್ರಣವಾನಂದರಾಮ ಸ್ವಾಮೀಜಿ, ಉಪ ವಿಭಾಗಾಧಿಕಾರಿ ದೀಲಿಪ ಶಶಿ, ಡಿವೈಎಸ್‌ಪಿ ಟಿ.ವಿ. ಸುರೇಶ ಹಾಗೂ ಗ್ರಾಪಂ ಪಿಡಿಒ ಡಿ.ಬಿ. ಹರಿಜನ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.<br/>