* ಗಾಬರಿಗೊಂಡು ಮನೆಯಿಂದ ಹೊರಗೆ ಓಡಿ ಬಂದ ಜನತೆ * ನಿದ್ದೆ ಮಾಡದೆ ರಾತ್ರಿ ಇಡೀ ಭಯದಲ್ಲಿಯೇ ಕಳೆದ ಜನರು* ಭೂಕಂಪನ ಆಗಿರುವ ಕುರಿತು ಯಾವುದೇ ಮಾಹಿತಿ ದಾಖಲಾಗಿಲ್ಲ: ಡಿಸಿ

ವಿಜಯಪುರ(ಜೂ.14):  ಜಿಲ್ಲೆಯ ಹಲವೆಡೆ ಭಾನುವಾರ ಮುಂಜಾನೆ 2.25 ರಿಂದ 2.30ರ ಅವಧಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. 

Add Asianetnews Kannada as a Preferred SourcegooglePreferred

ವಿಜಯಪುರ ನಗರದ ಗ್ಯಾಂಗ್‌ ಬಾವಡಿ ಹಾಗೂ ಲೋಹಗಾಂವಿ, ಅರಕೇರಿ, ಕಳ್ಳಕವಟಗಿ ಸೇರಿದಂತೆ ಅನೇಕ ಭಾಗಗಳಲ್ಲಿ ಭಾನುವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ಗಾಢ ನಿದ್ದೆಯಲ್ಲಿದ್ದ ಮಂದಿ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆಯೇ ಹೆದರಿ ಮನೆಯಿಂದ ಆಚೆ ಓಡಿ ಬಂದಿದ್ದಾರೆ. 

ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

ನಿದ್ದೆ ಮಾಡದೆ ರಾತ್ರಿ ಇಡೀ ಭಯದಲ್ಲಿಯೇ ಕಳೆದಿದ್ದಾರೆ. ಆದರೆ, ನಗರ ಸೇರಿದಂತೆ ಜಿಲ್ಲೆಯ ಯಾವ ಭಾಗದಲ್ಲೂ ಭೂಕಂಪನ ಆಗಿರುವ ಕುರಿತು ಯಾವುದೇ ಮಾಹಿತಿ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.