Asianet Suvarna News Asianet Suvarna News

ವಿಜಯಪುರ: 'ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸನ್ನದ್ಧರಾಗಿ'

ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಿ| ಜಿಲ್ಲಾಧಿಕಾರಿಗಳಿಂದ ಕಟ್ಟುನಿಟ್ಟಿನ ಸೂಚನೆ| ವಿಜಯಪುರ ಜಿಲ್ಲೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿನ ಜಲಾಶಯಗಳತ್ತ ದಿನಂಪ್ರತಿ ನಿಗಾ| ಜಲಾಶಯಗಳ ನೀರಿನ ಪ್ರಮಾಣ, ಶೇಖರಣೆ ಹಾಗೂ ಜಲಾಶಯಗಳಿಂದ ಹರಿಬಿಡುವ ನೀರಿನ ಪ್ರಮಾಣದ ಮೇಲೆ ನಿಗಾ|

DC Y S Patil Says Prepare for Disaster in Vijayapura District
Author
Bengaluru, First Published May 27, 2020, 12:44 PM IST

ವಿಜಯಪುರ(ಮೇ.27): ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಪ್ರವಾಹವನ್ನು ಎದುರಿಸಿರುವುದರಿಂದ ಈ ಬಾರಿಯೂ ಮುನ್ನೆಚ್ಚರಿಕೆಯಾಗಿ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಗಾರು ಪ್ರವಾಹ ಮುನ್ನೆಚ್ಚರಿಕೆ ಕ್ರಮದ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಮಳೆಯಾಗುವ ಕಾರಣದಿಂದಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಬಂಧಿಸಿದ ಎಲ್ಲ ಇಲಾಖೆಯವರು ಕೈಗೊಳ್ಳಬೇಕು. ನದಿ ತೀರದ ಪ್ರದೇಶಗಳು ಸೇರಿದಂತೆ ಮುಳುಗಡೆಯಾಗುವ ಪ್ರದೇಶಗಳ ಮೇಲೆ ನಿಗಾ ಇಟ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಲಾಕ್‌ಡೌನ್‌ನಿಂದ ಹೊರ ರಾಜ್ಯಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಕ್ಷಿಸಿದ ನಡಹಳ್ಳಿ

ವರದಿ ನೀಡಿ:

ಪ್ರತಿ ಇಲಾಖೆಯ ಉಪ ವಿಭಾಗಾಧಿಕಾರಿಗಳ ಹಾಗೂ ತಹಸೀಲ್ದಾರ ಕಾರ್ಯಾಲಯದಲ್ಲಿ ಕಂಟ್ರೋಲ್‌ ರೂಮ್‌ ತೆರೆದು 24‍‍X7 ಗಂಟೆಗಳ ಕಾಲ ಸಹಾಯವಾಣಿ ಪ್ರಾರಂಭಿಸಿ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಪ್ರತಿದಿನ ಮಳೆಯ ಬಗ್ಗೆ ವರದಿಯನ್ನು ಜಿಲ್ಲಾ ಕಂಟ್ರೋಲ್‌ ರೂಮ್‌ ದೂರವಾಣಿ ಸಂಖ್ಯೆ ಟೋಲ್‌ ಫ್ರೀ ನಂಬರ್‌ 1077 ಹಾಗೂ 08352-221261 ಗೆ ನೀಡಬೇಕು ಎಂದು ಸೂಚಿಸಿದರು.

ಮುನ್ನೆಚ್ಚರಿಕೆ ನೀಡಿ:

ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯಿಂದ ಪ್ರತಿ ತಾಲೂಕಾವಾರು ಪ್ರವಾಹ ಮುನ್ನೆಚ್ಚರಿಕೆಗೆ ಸಂಬಂಧಿಸಿದಂತೆ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಕೃಷಿ ತೋಟಗಾರಿಕೆ ಇಲಾಖೆಯವರು ಪ್ರತಿದಿನ ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿದಿನದ ಮಳೆಯ ವರದಿ ಪ್ರಕೃತಿ ವಿಕೋಪದಿಂದ ಉಂಟಾಗುವ ಮಾನವ ಜಾನುವಾರು, ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಮತ್ತು ಮಳೆಗೆ ಬಿದ್ದಿರುವ ಮನೆಗಳ ವರದಿಯನ್ನು ಪ್ರತಿದಿನ ಸಲ್ಲಿಸಬೇಕು. ಪ್ರತಿ ಹಳ್ಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದರ್ಶಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿದ್ದು ಅತಿವೃಷ್ಟಿಬಗ್ಗೆ ಯಾವುದೇ ತೊಂದರೆಯಾಗುವ ಸಂಭವಿದ್ದಲ್ಲಿ ಆ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆಯನ್ನೂ ನೀಡಬೇಕು ಎಂದು ಹೇಳಿದರು.

ಔಷಧ ವ್ಯವಸ್ಥೆ ಬಗ್ಗೆ ಮುನ್ನೆಚ್ಚರಿಕೆ ಇರಲಿ:

ಅಗ್ನಿ ಶಾಮಕ ಇಲಾಖೆಯವರು ನದಿಗಳಲ್ಲಿ ನೀರು ಏರಿಬಂದಲ್ಲಿ ನದಿ ತೀರದ ಹಳ್ಳಿಯ ಜನರ ಸಂರಕ್ಷಣೆಗೆ ಬೋಟುಗಳ ಅವಶ್ಯಕತೆಯ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಹೋಮ್‌ಗಾರ್ಡ್‌ ಸಿಬ್ಬಂದಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ಜನರ ಸಂರಕ್ಷಣೆಗೆ ನಿಲ್ಲಬೇಕು. ಆರೋಗ್ಯ ಇಲಾಖೆ ಜನಸಾಮಾನ್ಯರಿಗೆ ಔಷಧಿಗಳ ದಾಸ್ತಾನು ಕುರಿತು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟುಸಂಗ್ರಹವಿದೆಯೋ ಎನ್ನುವ ಬಗ್ಗೆ ನೋಡಿಕೊಳ್ಳಬೇಕು. ದನಕರುಗಳಿಗೆ ಮೇವು, ಔಷಧಿಗಳ ವ್ಯವಸ್ಥೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾವು ಇನ್ನಿತರ ವಿಷ ಜಂತುಗಳ ಕಡಿತದಿಂದ ತೊಂದರೆಗಳಾಗುವ ಜನರಿಗೆ ಸೂಕ್ತ ಔಷಧೋಪಚಾರ ನೀಡಲು ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಸೂಚಿಸಿದರು.

ಕೆಬಿಜೆಎನ್‌ಎಲ್‌ ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿಯ ಜಲಾಶಯಗಳತ್ತ ದಿನಂಪ್ರತಿ ನಿಗಾ ಇಡಲಾಗಿದ್ದು, ಜಲಾಶಯಗಳ ನೀರಿನ ಪ್ರಮಾಣ, ಶೇಖರಣೆ ಹಾಗೂ ಜಲಾಶಯಗಳಿಂದ ಹರಿಬಿಡುವ ನೀರಿನ ಪ್ರಮಾಣದ ಮೇಲೆ ನಿಗಾ ಇಡಲಾಗಿದೆ. ಆಕಸ್ಮಿಕ ರೀತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡದಂತಿರಲು ಕರ್ನಾಟಕ ನೀರಾವರಿ ನಿಗಮಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ. ಸಿಇಒ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್‌, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಸ್ನೇಹಲ್‌ ಲೋಖಂಡೆ ಹಾಗೂ ಎಲ್ಲಾ ತಾಲೂಕಾ ತಹಸೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನೀರಿನ ತೊಂದರೆಗಳಾಗದಂತೆ ಮುನ್ನೆಚ್ಚರಿಕೆಯಾಗಿ ನಾರಾಯಣಪೂರ ಜಲಾಶಯದಲ್ಲಿ 3 ಟಿಎಂಸಿ ಹಾಗೂ ಆಲಮಟ್ಟಿಯಲ್ಲಿ 7 ಟಿಎಂಸಿ ನೀರನ್ನು ಸಂಗ್ರಹಿಸಲಾಗಿದೆ. ಪ್ರವಾಹದಿಂದ ಹಾಗೂ ಜಲಾಶಯಗಳ ಹಿನ್ನೀರಿನಿಂದ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು, ಅಂತಹ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಮುಂಚಿತವಾಗಿಯೇ ತೆರವುಗೊಳಿಸಿ ಕ್ರಮ ಜರುಗಿಸಬೇಕು ಎಂದು ಕೆಬಿಜೆಎನ್‌ಎಲ್‌ ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಅವರು ಹೇಳಿದ್ದಾರೆ. 

ಚರಂಡಿ ಸ್ವಚ್ಛಗೊಳಿಸಿ:

ಹೋಬಳಿ, ಗ್ರಾಪಂ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಿ ಕಾರ್ಯದ ಜವಾಬ್ದಾರಿ ವಹಿಸಬೇಕು. ತಾಲೂಕು ಮಟ್ಟದಲ್ಲಿ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಯೋಜನೆಯನ್ನು ತಯಾರಿಸುವುದು. ನಗರಪಾಲಿಕೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಮಟ್ಟದ ಸಂಘ, ಸಂಸ್ಥೆಗಳು ಮಳೆಯಿಂದಾಗಿ ಏನಾದರೂ ತೊಂದರೆಗಳು ಸಂಭವಿಸುವ ಪ್ರಸಂಗ ಕಂಡುಬಂದಲ್ಲಿ ಜನರನ್ನು ಎತ್ತರದ ಸ್ಥಳಕ್ಕೆ ಸಾಗಿಸಲು ಹಾಗೂ ಸಮುದಾಯ ಭವನ, ದೊಡ್ಡ ಕಟ್ಟಡಗಳನ್ನು ಗುರುತಿಸಿ ಇಟ್ಟುಕೊಂಡಿರಬೇಕು. ಸಂತ್ರಸ್ತರಿಗೆ ಗಂಜಿಕೇಂದ್ರ ತೆರೆಯಲು ಹಾಗೂ ಅಡುಗೆ ಸಾಮಾನುಗಳ ವ್ಯವಸ್ಥೆಯನ್ನು ಮಾಡಿಕೊಡಬೇಕು. ಬಿಸಿಯೂಟದ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಈಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
 

Follow Us:
Download App:
  • android
  • ios