ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆ ಮುಂದೂಡಿಕೆ| ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ| ಡಿಸೆಂಬರ್‌ 2020ರ ಅಂತ್ಯದವರೆಗೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಸರ್ಕಾರ ಮುಂದೂಡಿದೆ|

ಬೆಳಗಾವಿ(ಜು.18): ಮುಂಬರುವ ಆಗಸ್ಟ 27ಕ್ಕೆ ನಿಗದಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ (ಡಿ.ಸಿ.ಸಿ) ಬ್ಯಾಂಕಿನ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಡಿಸಿಸಿ ಬ್ಯಾಂಕಿನ ಆಡಳಿತಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ. 

Add Asianetnews Kannada as a Preferred SourcegooglePreferred

ಈ ಕುರಿತು ಪ್ರಕಟಣೆ ನೀಡಿರುವ ಅವರು ಡಿಸೆಂಬರ್‌ 2020ರ ಅಂತ್ಯದವರೆಗೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಸರ್ಕಾರ ಮುಂದೂಡಿದೆ ಎಂದು ತಿಳಿಸಿದ್ದಾರೆ. 

ಅಥಣಿ: ಕೊರೋನಾ ಭಯದಿಂದ ಬಾರದ ಜನ, ತಳ್ಳು ಗಾಡಿಯಲ್ಲಿ ಶವ ಸಾಗಿಸಿ ಅಂತ್ಯಕ್ರಿಯೆ!

ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಬ್ಯಾಂಕಿನ ಎಲ್ಲಾ ಸದಸ್ಯ ಸಹಕಾರಿ ಸಂಘಗಳಿಗೆ, ಬ್ಯಾಂಕುಗಳಿಗೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.