ಮೃತ ಗಂಗಮ್ಮ ಅವರ ಮನೆಗೆ ಭೇಟಿ ನೀಡಿ ಸಮಾಧಾನ ಹೇಳಿದ ಸಚಿವ ಡಾ. ಅಶ್ವತ್ಥನಾರಾಯಣ| ಪರಿಹಾರ ಹಣ ಬಿಡುಗಡೆ  ಸಂಬಂಧ ಅರಣ್ಯ ಇಲಾಖೆಯ ಜ್ಞಾಪನಾ ಪತ್ರ  ವಿತರಣೆ| ಎರಡು ಮೂರು ದಿನದೊಳಗೆ ಹಣ ಆನ್‌ಲೈನ್‌ ಮೂಲಕ ಖಾತೆಗೆ ಹಣ ಜಮೆ|

ರಾಮನಗರ(ಮೇ.22): ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಚಿರತೆ ದಾಳಿಗೆ ಬಲಿಯಾದ ಗಂಗಮ್ಮ (68) ಅವರ ಕುಟುಂಬದವರಿಗೆ ಸಾಂತ್ವನ ಹೇಳಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, 7.5 ಲಕ್ಷ ರೂ. ಪರಿಹಾರದ ಆದೇಶ ಪತ್ರವನ್ನು ಅವರಿಗೆ ಹಸ್ತಾಂತರಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮಾಗಡಿಯ ಕೊತ್ತಗೊಂಡನಹಳ್ಳಿಯ ಗಂಗಮ್ಮ ಅವರ ಮನೆಗೆ ಇಂದು(ಶುಕ್ರವಾರ) ಭೇಟಿ ನೀಡಿದ ಡಾ. ಅಶ್ವತ್ಥನಾರಾಯಣ, ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಸಮಾಧಾನ ಹೇಳಿದ್ದಾರೆ. ಪರಿಹಾರ ಹಣ ಬಿಡುಗಡೆ ಸಂಬಂಧ ಅರಣ್ಯ ಇಲಾಖೆಯ ಜ್ಞಾಪನಾ ಪತ್ರವನ್ನು ವಿತರಿಸಿ, ಎರಡು ಮೂರು ದಿನದೊಳಗೆ ಹಣ ಆನ್‌ಲೈನ್‌ ಮೂಲಕ ಖಾತೆಗೆ ಜಮೆ ಆಗಲಿದೆ ಎಂದು ಕುಟುಂಬದವರಿಗೆ ಭರವಸೆ ನೀಡಿದ್ದಾರೆ. 

ಮಗು, ವೃದ್ಧೆಯನ್ನ ತಿಂದು ತೇಗಿದ ನರ​ಭ​ಕ್ಷಕ ಚಿರತೆ ಕೊಲ್ಲಲು ಹೆಚ್ಚಿದ ಒತ್ತಡ

ಗಂಗಮ್ಮ ಅವರನ್ನು ಚಿರತೆ ಕೊಂದುಹಾಕಿದ ಸ್ಥಳಕ್ಕೆ ಭೇಟಿ ನೀಡಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜತೆಯಲ್ಲಿದ್ದ ಪರಿಸರ ತಜ್ಞ ಸಂಜಯ್‌ ಗುಬ್ಬಿ ಚಿರತೆಯ ಚಲನ ವಲನದ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಿದರು. ಗಂಗಮ್ಮ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಎಲ್ಲಾ ಪ್ರಯತ್ನ ಮಾಡುತ್ತಿದೆ. ಈಗಾಗಲೇ 15 ಬೋನುಗಳನ್ನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಸನ್ನದ್ಧ ಸ್ಥಿತಿಯಲ್ಲಿ ಇದ್ದಾರೆ. ಚಿರತೆಯ ಚಲನವಲನ ಗಮನಿಸಲು ಡ್ರೋಣ್ ಬಳಕೆ ಮಾಡಲಾಗುವುದು. ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದರು.