ಪ್ರಧಾನಿಗಳನ್ನು ಅರ್ಧಗಂಟೆಗಳ ಕಾಲ ಕಾಯಿಸಿದ ಮಮತಾ ಬ್ಯಾನರ್ಜಿ ಮಮತಾ ಬ್ಯಾನರ್ಜಿ ವರ್ತನೆ ಖಂಡನೀಯ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಕ್ರೋಶ 

 ಬಾಗಲಕೋಟೆ(ಮೇ.31): ಪ್ರಕೃತಿ ವಿಕೋಪದ ವೀಕ್ಷಣೆಗೆ ದೇಶದ ಪ್ರಧಾನಿಗಳು ಪಶ್ಚಿಮ ಬಂಗಾಲಕ್ಕೆ ಹೋದರೆ ಪ್ರಧಾನಿಗಳನ್ನು ಅರ್ಧಗಂಟೆಗಳ ಕಾಲ ಕಾಯಿಸಿದ ಮಮತಾ ಬ್ಯಾನರ್ಜಿ ಅವರ ವಿರುದ್ದ ಡಿಸಿಎಂ ಅಸಮಾಧಾನ ಹೊರಹಾಕಿದರು.

Add Asianetnews Kannada as a Preferred SourcegooglePreferred

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವರ್ತನೆ ಖಂಡನೀಯ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ತುರ್ತಾಗಿ ಸಿಎಂ ಆಗಬೇಕಂತಾರೆ, ಅದು ಆಗಲ್ಲ: ಡಿಸಿಎಂ ಕಾರಜೋಳ

 ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಮತಾ ಅವರಿಗೆ ಸಾಮಾನ್ಯ ಜ್ಞಾನ ಸಹ ಇಲ್ಲವಾಗಿದೆ. ದೇಶದ ಶಿಷ್ಟಾಚಾರವನ್ನು ಪಾಲಿಸದೆ ಹೋಗಿರುವ ಅವರ ವರ್ತನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.