* ಯಡಿಯೂರಪ್ಪ ರಾಜೀನಾಮೆ ಬಗ್ಗೆ ಚರ್ಚೆ ಅನಗತ್ಯ* ಪಕ್ಷದಲ್ಲಿ ಬಿಎಸ್‌ವೈ ರಾಜೀನಾಮೆ ವಿಚಾರ ಪ್ರಸ್ತಾಪವಾಗಿಲ್ಲ* ಸಿಎಂ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ 

ಅಥಣಿ(ಜೂ.09): ಮನಸ್ಸಿಗೆ ನೋವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ವಿಷಯ ಮಾತನಾಡಿರಬಹುದು ಅಷ್ಟೇ. ಕೋವಿಡ್‌ ಸಂಕಷ್ಟದ ಸಂದಿಗ್ಧ ಪರಿಸ್ಥಿತಿಯಲ್ಲಿ ಅವರ ರಾಜೀನಾಮೆ ವಿಷಯ ಚರ್ಚೆ ಅನಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಮಾಧ್ಯಮಗಳಲ್ಲಿ ಪದೇ ಪದೇ ಸಿಎಂ ಬದಲಾವಣೆ ವಿಚಾರವನ್ನು ಕೆಲವರು ಹಂಚಿಕೊಂಡಿದ್ದರಿಂದ ಎಲ್ಲೋ ಒಂದು ಕಡೆ ಅವರು ಬೇಜಾರು ಮಾಡಿಕೊಂಡು ಈ ವಿಚಾರವನ್ನು ಹೇಳಿರಬಹುದು ಅಷ್ಟೇ ಎಂದು ತಿಳಿಸಿದ್ದಾರೆ. 

ಎಲ್ಲಾನೂ ಸಿಎಂ ಮಾಡೋದಾದ್ರೆ ಬೆಳಗಾವಿಗೆ 4 ಮಂತ್ರಿಗಳೇಕೆ?: ಸತೀಶ್‌ ಜಾರಕಿಹೊಳಿ

ಪಕ್ಷದಲ್ಲಿ ಅವರ ರಾಜೀನಾಮೆ ವಿಚಾರ ಪ್ರಸ್ತಾಪವಾಗಿಲ್ಲ. ಹೈಕಮಾಂಡ್‌ನ ಯಾವೊಬ್ಬ ನಾಯಕರು ಇದರ ಬಗ್ಗೆ ಮಾತನಾಡಿಲ್ಲ. ಸಿಎಂ ಅವರ ಹೇಳಿಕೆಯಿಂದ ಇಂದು ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.