ಆಶಾ ಕಾರ್ಯಕರ್ತೆ ಮತ್ತು ಗ್ರಾಮ ಪಂಚಾಯತ್‌ ಟಾಸ್ಕ್‌ಫೋರ್ಸ್‌ ಅಧ್ಯಕ್ಷರಿಗೆ ನಿಂದಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಪುಂಜಾಲಕಟ್ಟೆಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಂಗಳೂರು(ಮೇ 12): ಆಶಾ ಕಾರ್ಯಕರ್ತೆ ಮತ್ತು ಗ್ರಾಮ ಪಂಚಾಯತ್‌ ಟಾಸ್ಕ್‌ಫೋರ್ಸ್‌ ಅಧ್ಯಕ್ಷರಿಗೆ ನಿಂದಿಸಿ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಪುಂಜಾಲಕಟ್ಟೆಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಟ್ವಾಳ ತಾಲೂಕು ಕುಕ್ಕಿಪ್ಪಾಡಿ ಗ್ರಾಮದ ಅಭ್ಯಂತ್‌ ಎಂಬಲ್ಲಿ ನಿವಾಸಿಗಳಾದ ವಿಶ್ವನಾಥ ಆಚಾರ್ಯ ಮತ್ತು ಶ್ರೀಮತಿ ಆಚಾರ್ಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕುಕ್ಕಿಪ್ಪಾಡಿ ಗ್ರಾಮದಲ್ಲಿ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆ ಪುಷ್ಪಲತಾ ಎಂಬವರು ಭಾನುವಾರ ಆರೋಪಿಗಳಾದ ವಿಶ್ವನಾಥ ಆಚಾರ್ಯ ಮತ್ತು ಶ್ರೀಮತಿ ಆಚಾರ್ಯ ಅವರ ಮನೆ ಪರಿಸರದಲ್ಲಿ ಹಲವಾರು ವಾಹನ ಮತ್ತು ಜನರು ಗುಂಪುಗೂಡಿರುವುದನ್ನು ಗಮನಿಸಿ ಈ ಬಗ್ಗೆ ಮನೆ ಮಂದಿಯಲ್ಲಿ ಮಾಹಿತಿ ಕೇಳಲು ಹೋಗಿದ್ದರು. ಆಗ ಅವರನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಿವೃತ್ತ ಯೋಧನ ಮನೆಯಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಯತ್ನ

ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ ಪೊರಕೆಯಿಂದ ಹಲ್ಲೆಗೆ ಯತ್ನಿಸಲಾಗಿದೆ. ಕೂಡಲೇ ಅವರು ಈ ವಿಷಯವನ್ನು ಗ್ರಾಮ ಪಂಚಾಯತ್‌ ಟಾಸ್ಕ್‌ ಪೋರ್ಸ್‌ ಅಧ್ಯಕ್ಷರಿಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ 504.506 ಮತ್ತು 5(2) ಕರ್ನಾಟಕ ಸಾಂಕ್ರಾಮಿಕ ರೋಗಗಳ ಅದ್ಯಾದೇಶ 2020ರಂತೆ ಪ್ರಕರಣ ದಾಖಲಾಗಿದೆ.