ಡಿ.6ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಘೋಷಿಸಲಾಗಿದೆ.

ಮಂಗಳೂರು(ಡಿ.06): ಡಿ.6ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆದೇಶ ಹೊರಡಿಸಲಾಗಿದೆ.

Add Asianetnews Kannada as a Preferred SourcegooglePreferred

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಘೋಷಿಸಲಾಗಿದೆ.

ಈ ಬಾರಿ ಬಾಬ್ರಿ ಮಸೀದಿ ಧ್ವಂಸ ‘ಸಂಭ್ರಮ’ ಇಲ್ಲ?

ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಡಿ. 7 ರ ಬೆಳಿಗ್ಗೆ 6 ಗಂಟೆ ವರೆಗೆ ಸೆ. 144 ರ ಪ್ರಕಾರ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯು ಅತಿ ಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 35ರ ಅನ್ವಯ ಈ ಆದೇಶವನ್ನು ನಗರ ಪೊಲೀಸ್‌ ಕಮಿಷನರ್‌ ಡಾ.ಹರ್ಷ ಹೊರಡಿಸಿದ್ದಾರೆ.

ವೈದ್ಯೆ ರೇಪ್, ಕೊಲೆ ಪ್ರಕರಣ: ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿ!