ಮುಳುಗಡೆ ಜಿಲ್ಲೆ ಉಸ್ತುವಾರಿ ಡಿಸಿಎಂ ಕಾರಜೋಳ ಹೆಗಲಿಗೆ| ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗೋವಿಂದ ಕಾರಜೋಳ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ| ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಕಾರಜೋಳ ಹೆಗಲಿಗೆ|

ಬಾಗಲಕೋಟೆ: (ಸೆ. 17) ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾರಜೋಳ ಅವರಿಗೆ ಬಾಗಲಕೋಟೆ ಜೊತೆಗೆ ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲಾ ಪ್ರಭಾರರನ್ನು ವಹಿಸಲಾಗಿದೆ.

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬರೋಬ್ಬರಿ 53 ದಿನಗಳ ಬಳಿಕ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ.