ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಧರ್ಮಸ್ಥಳದಲ್ಲಿ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದ್ದು, ಅನ್ನದಾನವೂ ನಡೆಯುತ್ತಿದೆ. ಆದರೆ ಇದೀಗ ಭಾನುವಾರ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಪೂಜಾ ಸಮಯ ಬದಲಾಯಿಸಲಾಗಿದೆ.

ಮಂಗಳೂರು(ಜೂ.17): ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಧರ್ಮಸ್ಥಳದಲ್ಲಿ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದ್ದು, ಅನ್ನದಾನವೂ ನಡೆಯುತ್ತಿದೆ. ಆದರೆ ಇದೀಗ ಭಾನುವಾರ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಪೂಜಾ ಸಮಯ ಬದಲಾಯಿಸಲಾಗಿದೆ.

Add Asianetnews Kannada as a Preferred SourcegooglePreferred

ಧರ್ಮಸ್ಥಳದ ಅಣ್ಣಪ್ಪ ದೈವದ ಮಹಾತ್ಮೆ

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಭಾನುವಾರ ಸೂರ್ಯಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದರ್ಶನ ‌ಸಮಯ ಬದಲಿಸಲಾಗಿದೆ. ಭಾನುವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇರುವುದಿಲ್ಲ.

ಧರ್ಮಸ್ಥಳದಲ್ಲಿ 6 ಸಾವಿರ ಜನರಿಂದ ಅನ್ನಪ್ರಸಾದ ಸ್ವೀಕಾರ, 3 ಸಾವಿರ ಜನರಿಂದ ಕೇಶ ಮುಂಡನ

ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಬೆಳಗ್ಗೆ 5.30ರಿಂದ ಬೆಳಗ್ಗೆ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೆ ಸಂಜೆ‌ 4ರಿಂದ ರಾತ್ರಿ 9ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"