Asianet Suvarna News Asianet Suvarna News

ಬಿಲ್ಡರ್‌ಗೆ 11 ಲಕ್ಷ ರೂ ದಂಡ ಮತ್ತು ಪರಿಹಾರ ವಿಧಿಸಿದ ಧಾರವಾಡ ಗ್ರಾಹಕ ನ್ಯಾಯಾಲಯ ಆದೇಶ

ಖರೀದಿ ಕರಾರು ಒಪ್ಪಂದದಂತೆ ನಿವೇಶನಗಳನ್ನು ಅಭಿವೃಧ್ದಿಪಡಿಸುವಲ್ಲಿ ವಿಫಲರಾಗಿದ್ದ ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ಸ್ ಹಾಗೂ ಡೆವಲಪರ್ಸ್‍ ಗೆ  ರೂ.11 ಲಕ್ಷದ 8 ಸಾವಿರದ 80 ರೂಪಾಯಿಗಳ ಮೇಲೆ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ತೀರ್ಪು ಆದ 2 ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ  ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

Dharwad consumer court orders Rs 11 lakh fine and compensation to prithvi builders gow
Author
First Published Dec 1, 2022, 10:15 PM IST

ವರದಿ: ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್

ಧಾರವಾಡ (ಡಿ.1): ಹಳೆ ಹುಬ್ಬಳ್ಳಿಯ ಹತ್ತಿರದ ಮಗಜಿಕೊಂಡಿ ನಿವಾಸಿ ಡಾ:ಗೀತಾ ಜೋಡಂಗಿ ಎಂಬುವವರು ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ಸ್ ಹಾಗೂ ಡೆವಲಪರ್ಸ್‍ರವರಿಂದ ಗಾಮನಗಟ್ಟಿ ಗ್ರಾಮದಲ್ಲಿ ನೂತನವಾಗಿ ಅಭಿವೃದ್ಧಿಪಡಿಸುತ್ತಿರುವ ಗಾಮನಗಟ್ಟಿ ಲೇಔಟ್‍ನಲ್ಲಿ 11 ಲಕ್ಷ 49 ಸಾವಿರದ 885 ರೂಪಾಯಿಗಳಿಗೆ ಪ್ಲಾಟ ನಂ.65 ನ್ನು ಖರೀದಿಸಿದ್ದರು. ಈ ಬಗ್ಗೆ ಉಭಯತರ ಮಧ್ಯ ಖರೀದಿ ಒಪ್ಪಂದ ಪತ್ರ ಆಗಿತ್ತು. ಖರೀದಿದಾರರು ಒಟ್ಟು ರೂ.11 ಲಕ್ಷ 8 ಸಾವಿರದ 80 ರೂಪಾಯಿಗಳನ್ನು ಮುಂಗಡವಾಗಿ ಪಾವತಿಸಿದ್ದರು. ಆದರೆ ಡೆವಲಪರ್ಸ್‍ರವರು ಖರೀದಿ ಕರಾರು ಒಪ್ಪಂದದಂತೆ ನಿವೇಶನಗಳನ್ನು ಅಭಿವೃಧ್ದಿಪಡಿಸುವಲ್ಲಿ ವಿಫಲರಾಗಿದ್ದು ಮತ್ತು ಖರೀದಿ ಪತ್ರ ಮಾಡಿಕೊಟ್ಟಿರಲಿಲ್ಲ. ಒಂದಿಲ್ಲೊಂದು ನೆಪ ಹೇಳಿ ಖರೀದಿ ಪತ್ರ ಬರೆದುಕೊಡದೇ ಬಿಲ್ಡರ್ ಸತಾಯಿಸಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ದೂರುದಾರ ಬಿಲ್ಡರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
 
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಹಾಗೂ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರವರು ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ದೂರುದಾರನಿಗೆ ನಿವೇಶನ ಅಭಿವೃದ್ದಿಪಡಿಸಿ ಖರೀದಿ ಪತ್ರ ನೋಂದಣಿ ಮಾಡಿಕೊಡದೇ ಇರುವುದು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ವಿಜಯಪುರ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಅದಕ್ಕಾಗಿ ದೂರುದಾರರಿಂದ ಪಡೆದ ರೂ.11 ಲಕ್ಷದ 8 ಸಾವಿರದ 80 ರೂಪಾಯಿಗಳ ಮೇಲೆ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ತೀರ್ಪು ಆದ 2 ತಿಂಗಳ ಒಳಗಾಗಿ ಹಣ ಸಂದಾಯ ಮಾಡುವಂತೆ ಹಾಗೂ ಮಾನಸಿಕ ತೊಂದರೆಗೆ ರೂ.50,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/-ಗಳನ್ನು ಕೊಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

ನಿಯಮ ಉಲ್ಲಂಘನೆ: ಬೈಕ್‌ ಸವಾರನಿಗೆ 17,500 ದಂಡ

ಬಿಲ್ಡರಗಳೆ ಹುಷಾರು ನೀವು ಗ್ರಾಹಕರಿಂದ ಹಣ ಪಡೆದುಕ್ಕೊಂಡು ನಿವೇಶನವನ್ನು ಮಾಡಿ ಕೊಡದೆ ಇದ್ರೆ ನಿಮಗೂ ಇವರಿಗೆ ಆದ ದಂಡ ಬಿಳುತ್ತೆ ಎಂದು ಖಡಕ್ ಎಚ್ಚರಿಕೆಯನ್ನ ಗ್ರಾಹಕ ನ್ಯಾಯಾಲಯ ಬಿಲ್ಡರಗಳಿಗೆ ರವಾನಿಸಿದೆ.

Follow Us:
Download App:
  • android
  • ios