Asianet Suvarna News Asianet Suvarna News

ಹುಬ್ಬಳ್ಳಿ: ಆಸ್ಟ್ರೇಲಿಯಾ ಮಹಿಳೆ ಪರದಾಟ, ಸ್ವದೇಶಕ್ಕೆ ಕಳುಹಿಸಿ ಮಾನವೀಯತೆ ಮೆರೆದ SP ಕಟಿಯಾರ್

ಮೂರು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಸಿಲುಕಿದ್ದ ಆಸ್ಟ್ರೇಲಿಯಾ ಮೂಲದ ಮೈಶಿಯಾನ ನಿಯಾಂಗ್ ಎಂಬ ಮಹಿಳೆ| ಲಾಕ್​ಡೌನ್ ಘೋಷಣೆಯಾದ್ದರಿಂದ ನಗರದ ರೇಣುಕಾ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದ ಮಹಿಳೆ|‌ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ತನ್ನ ದೇಶಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್​ಗೆ ಮನವಿ ಮಾಡಿದ್ದ ಮೈಶಿಯಾನ ನಿಯಾಂಗ್|

Dharwad SP Vartika Katiyar Help to Australia Based Woman in Hubballi
Author
Bengaluru, First Published May 29, 2020, 3:22 PM IST

ಹುಬ್ಬಳ್ಳಿ(ಮೇ.29): ಲಾಕ್​ಡೌನ್ ವೇಳೆ ಹುಬ್ಬಳ್ಳಿಯಲ್ಲಿ ಸಿಲುಕಿಕೊಂಡು ಪರದಾಟ ನಡೆಸಿದ್ದ ಆಸ್ಟ್ರೇಲಿಯಾದ ಮಹಿಳೆಯನ್ನು ಸ್ವದೇಶಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವ ಮೂಲಕ ಧಾರವಾಡದ ಎಸ್​ಪಿ ವರ್ತಿಕಾ ಕಟಿಯಾರ್ ಮಾನವೀಯತೆ ಮೆರೆದಿದ್ದಾರೆ.

ಆಸ್ಟ್ರೇಲಿಯಾ ಮೂಲದ ಮೈಶಿಯಾನ ನಿಯಾಂಗ್ ಎಂಬ ಮಹಿಳೆ ಮೂರು ತಿಂಗಳ ಹಿಂದೆ ಹುಬ್ಬಳ್ಳಿಗೆ ಆಗಮಿಸಿದ್ದರು. ಲಾಕ್​ಡೌನ್ ಘೋಷಣೆಯಾದ್ದರಿಂದ ನಗರದ ರೇಣುಕಾ ಲಾಡ್ಜ್​ನಲ್ಲಿ ವಾಸ್ತವ್ಯ ಹೂಡಿದ್ದರು.‌ ನಿನ್ನೆ(ಗುರುವಾರ) ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ತನ್ನ ದೇಶಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್​ಗೆ ಮನವಿ ಮಾಡಿದ್ದರು.

ಹುಬ್ಬಳ್ಳಿ: FMCG ಕಾರ್ಖಾನೆ ಪ್ರಾರಂಭಕ್ಕೆ ಸನ್ನಿಹಿತ, ನಿರುದ್ಯೋಗ ಸಮಸ್ಯೆ ನಿವಾರಣೆ

ವಿದೇಶಿ ಮಹಿಳೆಗೆ ಸಹಾಯ ಮಾಡುವಂತೆ ಎಸ್​ಪಿ ವರ್ತಿಕಾ ಕಟಿಯಾರ್​ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.  ಅದರಂತೆ ವರ್ತಿಕಾ ಕಟಿಯಾರ್ ಅವರು ರಾಯಭಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವವರನ್ನು ಸಂಪರ್ಕಿಸಿ ಮಹಿಳೆಯನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

ನಗರದ ರೇಣುಕಾ ಲಾಡ್ಜ್​ಗೆ ಭೇಟಿ ನೀಡಿದ್ದ ಎಸ್​ಪಿ, ಖಾಸಗಿ ವಾಹನದ ವ್ಯವಸ್ಥೆ ಮಾಡಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕಳುಹಿಸಲು ಸಿದ್ಧತೆ ಮಾಡಿದರು.‌ ನಂತರ ಮಹಿಳೆ ಬೆಂಗಳೂರಿನಿಂದ ದೆಹಲಿ ತಲುಪಿ, ದೆಹಲಿಯಿಂದ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ಎಸ್​ಪಿ ಅವರ ಈ ಕಾರ್ಯಕ್ಕೆ ಮಹಿಳೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಎಸ್​ಪಿ ವರ್ತಿಕಾ ಕಟಿಯಾರ್, ಆಧ್ಯಾತ್ಮಿಕ ಜ್ಞಾನ ‌ಕಲಿಕೆ ಹಿನ್ನೆಲೆಯಲ್ಲಿ ಆಗಮಿಸಿದ ಮಹಿಳೆಯನ್ನು ತಮ್ಮ ದೇಶಕ್ಕೆ ಕಳುಹಿಸಿ ಕೊಡಲಾಗುತ್ತಿದೆ. ಅವರಿಗೆ ನಮ್ಮ ಸಿಬ್ಬಂದಿ ಆರ್ಥಿಕ ಸಹಾಯ ಮಾಡಿದ್ದಾರೆ ಎಂದರು. ಈ‌ ವೇಳೆ ಹು-ಧಾ ಡಿಸಿಪಿ‌ ಕೃಷ್ಣಕಾಂತ್, ಗ್ರಾಮೀಣ ಸಿಪಿಐ ಡಿಸೀಜಾ, ಉಪ ನಗರ ಸಿಪಿಐ ಸುಂದರೇಶ ಹೊಳೆಣ್ಣವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾಳೆ ಬರಲಿದೆ ಕೋವಿಡ್ ವರದಿ

ಮಹಾಮಾರಿ ಕೊರೋನಾ ವೈರಸ್‌ ಹಾವಳಿ ಹಿನ್ನಲೆಯಲ್ಲಿ ಈ ಮಹಿಳೆಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ವರದಿ ನಾಳೆ(ಶನಿವಾರ) ಬರಲಿದೆ. ಹೀಗಾಗಿ ವರದಿ ಬಂದ ಬಳಿಕ ರಿಪೋರ್ಟ್‌ ನೋಡಿಕೊಂಡು ಪ್ರಯಾಣ ಆರಂಭಿಸಲಿದ್ದಾಳೆ. ವರದಿಯು ನೆಗೆಟಿವ್‌ ಬಂದರೆ ಸ್ವದೇಶಕ್ಕೆ ಪ್ರಯಾಣ ಪೊಸಿಟಿವ್‌ ವರದಿ ಬಂದರೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಕಿತ್ಸೆ ಪಡೆದುಕೊಳ್ಳಲಿದ್ದಾರೆ.

Follow Us:
Download App:
  • android
  • ios