ರಾಜ್ಯದಲ್ಲಿ ಭಾರೀ ಏರಿಕೆಯಾಗಿದ್ದ ಕೊರೋನಾ ಸೋಂಕು ಕೊರೋನಾ ಸೋಂಕಿಗೆ ಅತ್ಯಧಿಕ ಸಂಖ್ಯೆಯಲ್ಲಿ ಜನರ ಬಲಿ ಹೆಚ್ಚು ಸಾವು ನೋವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ
ಮಂಡ್ಯ (ಜೂ.29): ಕೊರೋನಾದಿಂದ ಮೃತಪಟ್ಟವರ ಪೈಕಿ ಸುಮಾರು ಅರ್ಧದಷ್ಟು ಜನರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಶಾಸಕ ಸುರೇಶ್ ಗೌಡ ಆರೋಪಿಸಿದರು.
Add Asianetnews Kannada as a Preferred Source

ಮಂಡ್ಯದಲ್ಲಿ ಸೋಮವಾರ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಸಕಾಲದಲ್ಲಿ ಸೋಂಕಿತರಿಗೆ ವೈದ್ಯರಿಂದ ಸಮರ್ಪಕ ಚಿಕಿತ್ಸೆ ದೊರಕಿದ್ದರೆ ಸಾವಿನ ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಬಹುದಿತ್ತು ಎಂದರು.
ಕರ್ನಾಟಕದಲ್ಲಿ ಕೊರೋನಾ ರಿಲೀಫ್: 3 ಸಾವಿರಕ್ಕಿಂತ ಕಡಿಮೆ ಕೇಸ್! ...
ನನಗೆ ಗೊತ್ತಿರುವವರಿಗೆ ಒಂದು ವಾರವಾದರೂ ವೈದ್ಯರು ಸರಿಯಾದ ಚಿಕಿತ್ಸೆ ನೀಡಿರಲಿಲ್ಲ. ಆತ ಬದುಕುಳಿಯಲೇ ಇಲ್ಲ. ಕೇವಲ ಇದೊಂದೆ ಪ್ರಕರಣವಲ್ಲ. ಹಲವಾರು ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಸುರೇಶ್ ಗೌಡ ಹೇಳಿದರು.
