ರಾಜ್ಯದಲ್ಲಿ ಭಾರೀ ಏರಿಕೆಯಾಗಿದ್ದ ಕೊರೋನಾ ಸೋಂಕು ಕೊರೋನಾ ಸೋಂಕಿಗೆ ಅತ್ಯಧಿಕ ಸಂಖ್ಯೆಯಲ್ಲಿ ಜನರ ಬಲಿ ಹೆಚ್ಚು ಸಾವು ನೋವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ

 ಮಂಡ್ಯ (ಜೂ.29): ಕೊರೋನಾದಿಂದ ಮೃತಪಟ್ಟವರ ಪೈಕಿ ಸುಮಾರು ಅರ್ಧದಷ್ಟು ಜನರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಶಾಸಕ ಸುರೇಶ್ ಗೌಡ ಆರೋಪಿಸಿದರು. 

Add Asianetnews Kannada as a Preferred SourcegooglePreferred

ಮಂಡ್ಯದಲ್ಲಿ ಸೋಮವಾರ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಸಕಾಲದಲ್ಲಿ ಸೋಂಕಿತರಿಗೆ ವೈದ್ಯರಿಂದ ಸಮರ್ಪಕ ಚಿಕಿತ್ಸೆ ದೊರಕಿದ್ದರೆ ಸಾವಿನ ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಬಹುದಿತ್ತು ಎಂದರು. 

ಕರ್ನಾಟಕದಲ್ಲಿ ಕೊರೋನಾ ರಿಲೀಫ್: 3 ಸಾವಿರಕ್ಕಿಂತ ಕಡಿಮೆ ಕೇಸ್! ...

ನನಗೆ ಗೊತ್ತಿರುವವರಿಗೆ ಒಂದು ವಾರವಾದರೂ ವೈದ್ಯರು ಸರಿಯಾದ ಚಿಕಿತ್ಸೆ ನೀಡಿರಲಿಲ್ಲ. ಆತ ಬದುಕುಳಿಯಲೇ ಇಲ್ಲ. ಕೇವಲ ಇದೊಂದೆ ಪ್ರಕರಣವಲ್ಲ. ಹಲವಾರು ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಸುರೇಶ್ ಗೌಡ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona