ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು(ಮೇ 27): ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1)ವೈದ್ಯರು/ತಜ್ಞರು - 3 ಹುದ್ದೆ, ವಿದ್ಯಾರ್ಹತೆ-ಎಮ್‌.ಬಿ.ಬಿ.ಎಸ್‌/ ಯಾವುದೇ ತಜ್ಞತೆ( ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಆಗಿರಬೇಕು) 2) ಶುಶ್ರೂಷಕರು 9 ಹುದ್ದೆ, ವಿದ್ಯಾರ್ಹತೆ- ಕರ್ನಾಟಕ ಸರ್ಕಾರದಿಂದ ನೋಂದಾಯಿತ ಸಂಸ್ಥೆಗಳಿಂದ ಜಿಎನ್‌.ಎಂ/ ಬಿ.ಎಸ್‌.ಸಿ. ನರ್ಸಿಂಗ್‌ ಪದವಿ ಪಡೆದಿರಬೇಕು. 3) ಪ್ರಯೋಗ ಶಾಲಾ ತಜ್ಞರು 4 ಹುದ್ದೆ, ವಿದ್ಯಾರ್ಹತೆ- ಕರ್ನಾಟಕ ಅರೆವೈದ್ಯಕೀಯ ಮಂಡಳಿಯಿಂದ 2 ಅಥವಾ 3 ವರ್ಷಗಳ ಕಿ.ವೈ.ಪ್ರ.ಶಾ ತಂತ್ರಜ್ಞಾನ ತರಬೇತಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಪಡೆದಿರಬೇಕು. 4) ಗ್ರೂಪ್‌ ಡಿ - 6 ಹುದ್ದೆ, ವಿದ್ಯಾರ್ಹತೆ, ಎಸ್‌.ಎಸ್‌.ಎಲ್‌.ಸಿ ತೇರ್ಗಡೆಯಾಗಿರಬೇಕು.

ವಿದ್ಯಾರ್ಥಿನಿಯ ಕವನ ಪುಸ್ತಕಕ್ಕೆ ಅಭಿ​ನಂದನಾ ಪತ್ರ ಬರೆದ ಶಿಕ್ಷಣ ಸಚಿವ

ಈ ಮೇಲಿನ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ 6 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಮೇ 30ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ​ಧಿಕಾರಿ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2423672 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಅ​ಧಿಕಾರಿಗಳ ಪ್ರಕಟಣೆ ತಿಳಿಸಿದೆ.