Asianet Suvarna News Asianet Suvarna News

Doddaballapura: ಡಿಸಿ ಜೊತೆ ಕಾರ್ಯವೈಖರಿ ವೀಕ್ಷಣೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ ವಿದ್ಯಾಶ್ರೀ

ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ನಡೆಸಲಾದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿನಿ ವಿದ್ಯಾಶ್ರೀ ಡಿ.ಎಂ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಒಂದು ದಿನ ಇದ್ದು ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಿಸುವ ಅಪೂರ್ವ ಅವಕಾಶ ದೊರೆಯಿತು. 

Doddaballapura BSc Student Vidyashree observed the proceedings with DC R Lata gvd
Author
First Published Sep 21, 2022, 8:44 PM IST

ವರದಿ: ರವಿಕುಮಾರ್ ವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌

ಬೆಂಗಳೂರು ಗ್ರಾಮಾಂತರ (ಸೆ.21): ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ನಡೆಸಲಾದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿನಿ ವಿದ್ಯಾಶ್ರೀ ಡಿ.ಎಂ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರೊಂದಿಗೆ ಒಂದು ದಿನ ಇದ್ದು ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಿಸುವ ಅಪೂರ್ವ ಅವಕಾಶ ದೊರೆಯಿತು. ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿಯಾಗಿರುವ ವಿದ್ಯಾಶ್ರೀ ಡಿ.ಎಂ. ಅವರನ್ನು ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿತ್ತು. 

ಜಿಲ್ಲಾ ಕೌಶಲ್ಯ ಅಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಈ ಸ್ಪರ್ಧೆ ಏರ್ಪಡಿಸಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ (ಸೆ. 21) ಜಿಲ್ಲಾಧಿಕಾರಿಯವರೊಂದಿಗೆ ಅವರ ಕಚೇರಿಯಲ್ಲಿ ಇದ್ದು ಜಿಲ್ಲಾಧಿಕಾರಿಯವರ ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಯವರ ಕಾರ್ಯ ಕಲಾಪಗಳನ್ನು ಹತ್ತಿರದಲ್ಲಿ ನೋಡುವ ಅವಕಾಶ ವಿದ್ಯಾಗೆ ದೊರಕಿತು. ಬೆಳಿಗ್ಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಪೋಷಕರೊಂದಿಗೆ ಆಗಮಿಸಿದ ವಿದ್ಯಾಶ್ರೀ ಅವರನ್ನು ಜಿಲ್ಲಾಧಿಕಾರಿ ಆರ್.ಲತಾ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಆತ್ಮೀಯವಾಗಿ ಮಾತನಾಡಿದ ಜಿಲ್ಲಾಧಿಕಾರಿಯವರು ಮುಂದೆ ಏನಾಗಬೇಕೆಂದು ಬಯಸಿದ್ದೀರ ಎಂದು ವಿದ್ಯಾಶ್ರೀ ಅವರನ್ನು ಪ್ರಶ್ನಿಸಿದರು. 

ಅಧಿಕಾರಿಗಳ ಹಣದ ಆಸೆಗೆ ಲೇಔಟ್ ಮಾಲೀಕರ ಪಾಲಾದ ಸಿಎ ಸೈಟ್

ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾಶ್ರೀ  ಅವರು ನಾನು ನಿಮ್ಮ ಹಾಗೆ ಜಿಲ್ಲಾಧಿಕಾರಿ ಆಗಬೇಕು ಎಂದು ಕೊಂಡಿದ್ದೇನೆ ಎಂದರು. ಬಳಿಕ ಜಿಲ್ಲಾಧಿಕಾರಿಯವರೊಂದಿಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಇಲಾಖೆಗಳ ಆಂತರಿಕ ಸಭೆಗಳಲ್ಲಿ ವಿದ್ಯಾಅವರು ಜಿಲ್ಲಾಧಿಕಾರಿಗಳ ಪಕ್ಕದಲ್ಲೇ ಕುಳಿತು ವೀಕ್ಷಿಸಿದರು. ಸಭೆ ಸಂದರ್ಭದಲ್ಲಿ ಟಿಪ್ಪಣಿ ಸಹ ಮಾಡಿಕೊಳ್ಳುತ್ತಿದ್ದರು. ಇದೇ ವೇಳೆ ಅನಿಸಿಕೆ ಹಂಚಿಕೊಂಡ ವಿದ್ಯಾಶ್ರೀ ಜಿಲ್ಲಾಧಿಕಾರಿಯವರೊಂದಿಗೆ ಇಡೀ ಒಂದು ದಿನ ಇದ್ದು ಕಾರ್ಯ ಆಡಳಿತ ವೀಕ್ಷಿಸಲು ನನಗೆ ಅನುವು ಮಾಡಿಕೊಟ್ಟಿದ್ದು ದೊಡ್ಡ ಅವಕಾಶವಾಗಿದೆ. 

ಇದು ನನಗೆ ಮುಂದಿನ ಉನ್ನತ ವಿದ್ಯಾಭ್ಯಾಸದ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಲಿದೆ. ಆದ್ದರಿಂದ ನನಗೆ ಅತ್ಯಂತ ಸಂತಸ ತಂದಿದೆ. ಅವಕಾಶ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಕೌಶಲ್ಯ ಅಭಿವೃದ್ದಿ ಇಲಾಖೆಗೆ ಧನ್ಯವಾದಗಳು. ನನಗೆ ಬೆಂಬಲವಾಗಿ ನಿಂತಿರುವ ನನ್ನ ಪೋಷಕರಿಗೂ ಸಹ ವಂದನೆಗಳನ್ನು ತಿಳಿಸುತ್ತೇನೆ ಎಂದರು. ಜಿಲ್ಲಾಧಿಕಾರಿಯವರ ಸಭೆ ಕಾರ್ಯಗಳಲ್ಲಿ ಪಾಲ್ಗೊಂಡು ತಾಳ್ಮೆ, ಸಹನೆಯಿಂದ ಮಾಹಿತಿ ಪಡೆಯುವ ಹಾಗೂ ಸಲಹೆ ಸೂಚನೆಗಳನ್ನು ನೀಡುವ ವೈಖರಿಯನ್ನು ಹತ್ತಿರದಿಂದ ನೋಡುವ ಸದವಕಾಶ ದೊರೆಯಿತು. ಇದು ನನಗೆ ಸ್ಪೂರ್ತಿದಾಯಕವಾಗಿದೆ ಎಂದು ವಿದ್ಯಾರ್ಥಿನಿ ವಿದ್ಯಾಶ್ರೀ.ಡಿ.ಎಂ. ಅವರು ಹೇಳಿದರು. 

ಬಿಡಿಎ ವತಿಯಿಂದಲೇ 42 ಕಡೆ ಕೆರೆ ಒತ್ತುವರಿ ಮಾಡಿ ಬಡಾವಣೆ ನಿರ್ಮಾಣ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಮಾತನಾಡಿ ಕೌಶಲ್ಯ ಸ್ಫೂರ್ತಿ ಶೀರ್ಷಿಕೆ ಅಡಿಯಲ್ಲಿ 'ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ' ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ವಿದ್ಯಾರ್ಥಿನಿ ವಿದ್ಯಾಶ್ರೀ ಅವರು ನಮ್ಮ ಎಲ್ಲಾ ಕಾರ್ಯ ಕಲಾಪಗಳಲ್ಲಿ ಭಾಗಿಯಾಗುವ ಅವಕಾಶ ಪಡೆದು ಅತ್ಯಂತ ಕ್ರಿಯಾಶೀಲವಾಗಿ ಎಲ್ಲದರಲ್ಲೂ ಭಾಗಿಯಾದ ರೀತಿಯು ಮುಂದೆ ವಿದ್ಯಾಶ್ರೀ ಜಿಲ್ಲಾಧಿಕಾರಿ ಆಗುವ ಎಲ್ಲಾ ಲಕ್ಷಣಗಳಿವೆ ಎಂದು ಮುಂದಿನ ಉಜ್ವಲ ಭವಿಷ್ಯಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕರಾದ ಸಾದಿಕ್ ಪಾಷ, ಸಂಕಲ್ಪ ಜಿಲ್ಲಾ ಸಂಯೋಜಕರಾದ ಕಿರಣ್.ಆರ್.ಸಿ  ಮತ್ತು ವಿದ್ಯಾಶ್ರೀ ಅವರ ತಂದೆ ಮಂಜುನಾಥ್.ಎಂ.ಎಸ್. ಸೇರಿದಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow Us:
Download App:
  • android
  • ios