Asianet Suvarna News Asianet Suvarna News

ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿಯಾದ ಡಾ.ಪ್ರಭಾಕರ ಕೋರೆ

ರಾಯಬಾಗ ತಾಲೂಕಿನ ದಿಗ್ಗೇವಾಡಿ ಹಾಗೂ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಮ್ ಬ್ಯಾರೇಜ್ ಕಾಮಗಾರಿಯು ಪ್ರಗತಿಯಲ್ಲಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಬಿಡುಗಡೆ ಮಾಡಬೇಕು.  ಈ ಬ್ಯಾರೆಜ್‌ ಮೇಲೆ ರಸ್ತೆ ನಿರ್ಮಾಣ ಕಾಮಗಾರಿಯು ತ್ವರಿತವಾಗಿ ನಡೆಯಲು ಕ್ರಮಕೈಗೊಳ್ಳುವಂತೆ ಡಿಸಿಎಂ ಶಿವಕುಮಾರಗೆ ಮನವಿ ಮಾಡಿದ ಡಾ.ಕೋರೆ 

Dr. Prabhakar Kore met DCM DK Shivakumar in Bengaluru grg
Author
First Published May 24, 2024, 12:41 PM IST

ಬೆಳಗಾವಿ(ಮೇ.24):  ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿ ಗುರುವಾರ ಭೇಟಿಯಾಗಿ ಚರ್ಚಿಸಿದರು. 

ಈ ಸಮಯದಲ್ಲಿ ರಾಯಬಾಗ ತಾಲೂಕಿನ ದಿಗ್ಗೇವಾಡಿ ಹಾಗೂ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಮ್ ಬ್ಯಾರೇಜ್ ಕಾಮಗಾರಿಯು ಪ್ರಗತಿಯಲ್ಲಿದ್ದು, ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನು ಬಿಡುಗಡೆ ಮಾಡಬೇಕು. 

ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆ: ಶಾಸಕ ಲಕ್ಷ್ಮಣ ಸವದಿ ಲೇವಡಿ

ಈ ಬ್ಯಾರೆಜ್‌ ಮೇಲೆ ರಸ್ತೆ ನಿರ್ಮಾಣ ಕಾಮಗಾರಿಯು ತ್ವರಿತವಾಗಿ ನಡೆಯಲು ಕ್ರಮಕೈಗೊಳ್ಳುವಂತೆ ಡಾ.ಕೋರೆ ಅವರು ಡಿಸಿಎಂ ಶಿವಕುಮಾರಗೆ ಮನವಿಯನ್ನು ನೀಡಿದರು. ಮನವಿಗೆ ಸ್ಪಂದಿಸಿ ಸಮಾಲೋಚಿಸಿದ ಡಿಸಿಎಂ ಶೀಘ್ರವಾಗಿ ಕ್ರಮಗೊಳ್ಳಲಾಗುವುದೆಂದು ತಿಳಿಸಿದರು.

Latest Videos
Follow Us:
Download App:
  • android
  • ios