ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೂ ಕಂಪನವಾಗಿದ್ದು, ಹಲವು ಮನಯ ಗೋಡೆಗಳು ಕುಸಿದು ಬಿದ್ದಿವೆ. ಜನರು ಭಯದಿಂದ ಮನೆ ಬಿಟ್ಟು ಹೊರಗೆ ತೆರಳಿದ್ದಾರೆ.

ಬಸವನಬಾಗೇವಾಡಿ/ಕಲಬುರಗಿ (ಸೆ.18): ವಿಜಯಪುರ ಜಿಲ್ಲೆಯ ಬ.ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮತ್ತು ಚಿಂಚೋಳಿ ತಾಲೂಕಿನ ಇಂದ್ರಪಾಡಹೊಸಳ್ಳಿ ಗ್ರಾಮದಲ್ಲಿ ಭೂ ಕಂಪನದ ಅನುಭವವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ, ಅಧಿಕಾರಿಗಳು ಭೂಕಂಪನ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮನಗೂಳಿಯಲ್ಲಿ ಬುಧವಾರ ರಾತ್ರಿ ಸುಮಾರು 11.30ಕ್ಕೆ ಭೂಕಂಪನ ಆಗಿರುವ ಅನುಭವವಾಗಿದೆ. ಈ ವೇಳೆ ಜನರು ಹೆದರಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

 ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್‌ ಭೂಕಂಪನವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಇಂದ್ರಪಾಡಹೊಸಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಭಾರಿ ಶಬ್ದ ಉಂಟಾಗಿ ಭೂಕಂಪನದ ಅನುಭವವಾಗಿದೆ. 

ವಿಜಯಪುರದಲ್ಲಿ ಭೂ ಕಂಪನ; ಕಲಬುರ್ಗಿಯಲ್ಲಿ ಭಾರಿ ಸದ್ದು ...

6 ಮನೆ ಗೋಡೆಗಳು ಕುಸಿದು ಬಿದ್ದಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಚಿಂಕೋಳಿ ತಹಸೀಲ್ದಾರ್‌ ಅರುಣಕುಮಾರ ಕುಲಕರ್ಣಿ, ಭಾರಿ ಶಬ್ದ ಉಂಟಾಗಿರುವುದು ಭೂ ಕಂಪನದಿಂದಲ್ಲ. ಭೂಮಿಯ ಒಳಪದರು ಜೋಡಣೆ ಆಗುವ ಸಂದರ್ಭದಲ್ಲಿ ಭೂಮಿಯಿಂದ ಶಬ್ದ ಬರುತ್ತದೆ ಎಂಬುದು ಭೂ ವಿಜ್ಞಾನಿಗಳ ಅಭಿಪ್ರಾಯವಾಗಿದೆ ಎಂದರು.