Asianet Suvarna News Asianet Suvarna News

ವಿಜಯಪುರ, ಕಲಬುರಗಿಯಲ್ಲಿ ಭೂ ಕಂಪನ : ಕುಸಿದ ಗೋಡೆಗಳು

ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೂ ಕಂಪನವಾಗಿದ್ದು, ಹಲವು ಮನಯ ಗೋಡೆಗಳು ಕುಸಿದು ಬಿದ್ದಿವೆ. ಜನರು ಭಯದಿಂದ ಮನೆ ಬಿಟ್ಟು ಹೊರಗೆ ತೆರಳಿದ್ದಾರೆ.

earthquake At Kalaburagi vijayapura
Author
Bengaluru, First Published Sep 18, 2020, 7:51 AM IST

ಬಸವನಬಾಗೇವಾಡಿ/ಕಲಬುರಗಿ (ಸೆ.18):  ವಿಜಯಪುರ ಜಿಲ್ಲೆಯ ಬ.ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮತ್ತು ಚಿಂಚೋಳಿ ತಾಲೂಕಿನ ಇಂದ್ರಪಾಡಹೊಸಳ್ಳಿ ಗ್ರಾಮದಲ್ಲಿ ಭೂ ಕಂಪನದ ಅನುಭವವಾಗಿದೆ. 

ಆದರೆ, ಅಧಿಕಾರಿಗಳು ಭೂಕಂಪನ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮನಗೂಳಿಯಲ್ಲಿ ಬುಧವಾರ ರಾತ್ರಿ ಸುಮಾರು 11.30ಕ್ಕೆ ಭೂಕಂಪನ ಆಗಿರುವ ಅನುಭವವಾಗಿದೆ. ಈ ವೇಳೆ ಜನರು ಹೆದರಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

 ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್‌ ಭೂಕಂಪನವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಇಂದ್ರಪಾಡಹೊಸಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಭಾರಿ ಶಬ್ದ ಉಂಟಾಗಿ ಭೂಕಂಪನದ ಅನುಭವವಾಗಿದೆ. 

ವಿಜಯಪುರದಲ್ಲಿ ಭೂ ಕಂಪನ; ಕಲಬುರ್ಗಿಯಲ್ಲಿ ಭಾರಿ ಸದ್ದು ...

6 ಮನೆ ಗೋಡೆಗಳು ಕುಸಿದು ಬಿದ್ದಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಚಿಂಕೋಳಿ ತಹಸೀಲ್ದಾರ್‌ ಅರುಣಕುಮಾರ ಕುಲಕರ್ಣಿ, ಭಾರಿ ಶಬ್ದ ಉಂಟಾಗಿರುವುದು ಭೂ ಕಂಪನದಿಂದಲ್ಲ. ಭೂಮಿಯ ಒಳಪದರು ಜೋಡಣೆ ಆಗುವ ಸಂದರ್ಭದಲ್ಲಿ ಭೂಮಿಯಿಂದ ಶಬ್ದ ಬರುತ್ತದೆ ಎಂಬುದು ಭೂ ವಿಜ್ಞಾನಿಗಳ ಅಭಿಪ್ರಾಯವಾಗಿದೆ ಎಂದರು.

Follow Us:
Download App:
  • android
  • ios