*  ಹಲವು ಗ್ರಾಮಗಳಲ್ಲಿ ಲಘು ಭೂಕಂಪನ*  ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಕಂಪಿಸಿದ ಭೂಮಿ *  ಸುಮಾರು 4 ರಿಂದ 5 ಸೆಕೆಂಡ್ ಭೂಮಿ ಕಂಪಿಸಿದ ಅನುಭವದ  

ಮಂಗಳೂರು(ಜೂ.25): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಹಲವು ಗ್ರಾಮಗಳಲ್ಲಿ ಲಘು ಭೂಕಂಪನದ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಸುಳ್ಯ ತಾಲೂಕಿನ ಮರ್ಕಂಜ, ಕೊಡಪ್ಪಾಲ, ಗೂನಡ್ಕ, ಅರಂತೋಡು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು(ಶನಿವಾರ) ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮದ ಹಲವರಿಗೆ ಕಂಪನದ ಅನುಭವದ ಬಗ್ಗೆ ಮಾಹಿತಿ ನೀಡಿದ್ದಾರೆ. 

ವಿಜಯಪುರದಲ್ಲಿ ಮತ್ತೆ ಭೂಕಂಪನ: ಬೆಚ್ಚಿಬಿದ್ದ ಜನತೆ

ಸುಮಾರು 4 ರಿಂದ 5 ಸೆಕೆಂಡ್ ಭೂಮಿ ಕಂಪಿಸಿದ ಅನುಭವದ ಬಗ್ಗೆ ಮಾಹಿತಿ ಸಿಕ್ಕಿದ್ದು, ಕೆಲ ಮನೆಗಳ ಗೋಡೆಗಳಲ್ಲಿ ಸಣ್ಣಗೆ ಬಿರುಕು ಕಾಣಿಸಿಕೊಂಡಿದೆ. ಬಹುತೇಕ ಮಡಿಕೇರಿ ಗಡಿ ಭಾಗದ ಗ್ರಾಮಗಳಲ್ಲಿ ಈ ಕಂಪನದ ಅನುಭವ ಆಗಿದೆ. ಆದರೆ ಈ ಬಗ್ಗೆ ಅಧಿಕಾರಿಗಳಾಗಲೀ ಜಿಲ್ಲಾಡಳಿತವಾಗಲೀ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹಲವರು ತಮಗಾದ ಅನುಭದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭೂಕಂಪನವಾಗಿದೆ.