Asianet Suvarna News Asianet Suvarna News

ಸರ್ಕಾರಿ ಶಾಲಾ-ಕಾಲೇಜು ಅಭಿವೃದ್ಧಿಗೆ ಶೈಕ್ಷಣಿಕ ದತ್ತು

ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಶೈಕ್ಷಣಿಕ ದತ್ತು ಯೋಜನೆ ಸಹಕಾರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅಭಿಪ್ರಾಯಪಟ್ಟರು.

Educational adoption for government school  college development snr
Author
First Published Oct 8, 2022, 4:08 AM IST

ತುಮಕೂರು (ಅ.8): ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಶೈಕ್ಷಣಿಕ ದತ್ತು ಯೋಜನೆ ಸಹಕಾರಿಯಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಅಭಿಪ್ರಾಯಪಟ್ಟರು.

ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶೈಕ್ಷಣಿಕ ದತ್ತು ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಶಿಕ್ಷಣದ ಗುಣಮಟ್ಟಹೆಚ್ಚಿಸುವ ಜವಾಬ್ದಾರಿಯನ್ನು ಸರ್ಕಾರವು ಶೈಕ್ಷಣಿಕ ದತ್ತು ಕಾರ್ಯಕ್ರಮದ ಮೂಲಕ ನೀಡಿದ್ದು, ಈ ಕಾರ್ಯಕ್ರಮವು ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ. ಶಾಲಾ-ಕಾಲೇಜುಗಳಲ್ಲಿನ ಸಂಪನ್ಮೂಲಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಕೆ ಮಾಡಿ, ಶಿಕ್ಷಣ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ಶೈಕ್ಷಣಿಕ ದತ್ತು ಕಾರ್ಯಕ್ರಮವನ್ನು ಸರ್ಕಾರ ರೂಪಿಸಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಪದವಿ-ಪೂರ್ವ ಕಾಲೇಜು ಯಾವದಾದರೂ ಒಂದು ಶಾಲೆಯನ್ನು ದತ್ತು ಪಡೆದು, ನಿರಂತರ ಸಂಪರ್ಕದಲ್ಲಿದ್ದು, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ಕನಿಷ್ಠ ಒಂದು ಬಾರಿ ಭೇಟಿ:

ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ತಿಂಗಳಿಗೆ ಕನಿಷ್ಠ ಒಂದು ಅಥವಾ ಎರಡು ಬಾರಿ ಭೇಟಿ ನೀಡುವುದು. ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಸಲಹೆ, ಮಾರ್ಗದರ್ಶನ ನೀಡುವುದು, ವಿದ್ಯಾರ್ಥಿಗಳ, ಪ್ರಾಂಶುಪಾಲರು, ಶಿಕ್ಷಕರ ಜೊತೆ ಸಂವಾದ ನಡೆಸಿ, ಶಾಲೆಯಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಬಳಕೆ ಆಗುತ್ತಿದೆಯಾ ಎಂದು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ಕೊಡಬಹುದು. ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಗಳನ್ನು ನಿಗದಿಪಡಿಸಿಕೊಂಡು, ಅವುಗಳನ್ನು ಸಾಧಿಸಲು ಪ್ರೇರಣೆ ನೀಡುವುದು. ಅಧಿಕಾರಿಗಳು ತಮ್ಮ ವೃತ್ತಿಯ ಬಗ್ಗೆ ಮಾಹಿತಿ ಮತ್ತು ಅನುಭವಗಳನ್ನು ಹಂಚಿಕೊಳ್ಳವುದು, ಶಾಲೆಯಲ್ಲಿನ ಶೈಕ್ಷಣಿಕ ಚಟುವಟಿಕೆಗಳಾದ ಶಿಕ್ಷಕರ ಪಾಠ, ಬೋಧನೆ, ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕೆಯ ಮೌಲ್ಯಮಾಪನ ವಿಧಾನ ದಾಖಲಾತಿಗಳ ನಿರ್ವಹಣೆ, ಸ್ಮಾರ್ಚ್‌ ತರಗತಿ ಸೌಲಭ್ಯಗಳ ಬಳಕೆ, ಸಹ ಪಠ್ಯ ಚಟುವಟಿಕೆಗಳ ನಿರ್ವಹಣೆ ಮುಂತಾದ ಎಲ್ಲ ಅಂಶಗಳನ್ನು ಪರಿಶೀಲನೆ ಮಾಡಿ ಅಗತ್ಯ ಸಲಹೆ ಸೂಚನೆಗಳನ್ನು ಶಿಕ್ಷಕರಿಗೆ ನೀಡುವುದು ದತ್ತು ಪಡೆದವರ ಮುಖ್ಯ ಕರ್ತವ್ಯವಾಗಿದೆ. ಶಾಲೆಯನ್ನು ಬಿಟ್ಟಮಕ್ಕಳಿದ್ದಲ್ಲಿ ಅವರನ್ನು ಶಾಲೆಗೆ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು. ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಇಲಾಖೆಯಿಂದ ನೀಡಲಾಗಿರುವ ಸಂಪನ್ಮೂಲ ಸದ್ಭಳಕೆಯಾಗಿರುವ ಬಗ್ಗೆ ಪರಿಶೀಲಿಸಿ ಅನುಪಾಲನೆ ಮಾಡಬೇಕು. ಕಪಾಟು, ಮೇಜುಗಳು, ವಿದ್ಯುತ್‌ ಸರಬರಾಜು ವ್ಯವಸ್ಥೆ, ಇಲಾಖೆಯ ಸಮುದಾಯದ ದತ್ತು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡುವುದು. ಕಲಿಕಾ ಪೂರಕ ಚಟುವಟಿಕೆಗಳಿಗೆ ಅಗತ್ಯವಾದ ಸಲಹೆ, ಶೌಚಾಲಯ, ಕಟ್ಟಡ ನಿರ್ಮಾಣ ನವೀಕರಣ, ಪೀಠೋಪಕರಣ, ಸೇರಿದಂತೆ ಕಾಂಪೌಂಡ್‌ ನಿರ್ಮಾಣ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಮಾರ್ಗದರ್ಶನ ನೀಡುವುದು, ಕರಕುಶಲ ಇತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೋ›ತ್ಸಾಹಿಸುವುದು, ಏರ್ಪಡಲಿರುವ ಸಾಂಸ್ಕೃತಿಕ ಕಾರ್ಯಕ್ರಮ, ವಿಜ್ಞಾನ ವಸ್ತು ಪ್ರದರ್ಶನ, ಅಕ್ಷರ ದಾಸೋಹದ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಶಿಕ್ಷಕರಿಗೆ ಸಲಹೆ ನೀಡುವುದು. ದಾಸೋಹ ಕೊಠಡಿಯ ಸ್ವಚ್ಛತೆ ಕಾಪಾಡುವಂತೆ ನೋಡಿಕೊಳ್ಳುವುದಾಗಿದೆ, ಶಾಲೆ ಕೈಗೊಳ್ಳುತ್ತಿರುವ ಉತ್ತಮ ಕಾರ್ಯಗಳ ಮಾಹಿತಿ ಪಡೆದು, ಅಗತ್ಯವಾದ ಮಾರ್ಗದರ್ಶನ, ಪ್ರೇರಣೆ ನೀಡುವುದು. ಕುಂದು-ಕೊರತೆಗಳನ್ನು ನಿವಾರಣೆಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಪ್ರೇಮಿಗಳು, ದಾನಿಗಳ ನೆರವಿನಿಂದ ಅಗತ್ಯ ಕ್ರಮ ಕೈಗೊಳ್ಳುವುದು, ಈ ಕಾರ್ಯಕ್ರಮದ ಉದ್ದೇಶಗಳಾಗಿವೆ ಎಂದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಅಜಯ್‌.ವಿ, ಭೂ ದಾಖಲೆಗಳ ಉಪನಿರ್ದೇಶಕರಾದ ಸುಜಯ್‌ ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ನಂಜಯ್ಯ ಸೇರಿದಂತೆ ವಿವಿಧ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳ್ಳಾವಿ ಶಾಲೆ ದತ್ತು:

ತಾವು ಬೆಳ್ಳಾವಿ ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಶೈಕ್ಷಣಿಕ ದತ್ತು ಪಡೆದಿದ್ದು, ಶಾಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ. ಸರ್ಕಾರಿ ಅಧಿಕಾರಿಗಳು/ನೌಕರರು ತಮ್ಮ ಉದಾರತೆ ತೋರುತ್ತಾರೆ ಎಂಬುದಕ್ಕೆ ಹಲವು ನಿರ್ದೇಶನಗಳು ಇದ್ದು, ಜಿಲ್ಲೆಯ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಿಸಲು ಮತ್ತು ಶಾಲೆಗಳನ್ನು ಅಭಿವೃದ್ಧಿಪಡಿಸಲು ದತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಾಲೆಗಳನ್ನು ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ವಿಶಿಷ್ಠವಾದ ಕಲ್ಪನೆಯಾಗಿದೆ. ಇದು ಉಳಿದವರಿಗೂ ಪ್ರೇರಣೆಯಾಗಲಿದೆ, ಈ ಕಾರ್ಯಕ್ರಮವು ಮಕ್ಕಳ ಸಮಗ್ರ ಹಿತ ಮತ್ತು ವಿದ್ಯಾರ್ಥಿಗಳ ಸವಾಂರ್‍ಗೀಣ ಅಭಿವದ್ಧಿ ಒಳಗೊಂಡಿದ್ದು, ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಗಳು ತಿಳಿಸಿದರು

Follow Us:
Download App:
  • android
  • ios