ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಶಿಬಿರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವನ್ನಪ್ಪಿದೆ.
ಮೈಸೂರು(ಏ.10): ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಶಿಬಿರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವನ್ನಪ್ಪಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಶಿಬಿರದಲ್ಲಿದ್ದ ವಿರಾಟ್ ಸಾಕಾನೆ ಅನಾರೋಗ್ಯದಿಂದ ಮೃತಪಟ್ಟಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವೀರನಹೊಸಹಳ್ಳಿ ವನ್ಯಜೀವಿ ವಲಯದಿಂದ 04-11-2023 ರಂದು ಸೆರೆ ಹಿಡಿಯಲಾಗಿತ್ತು. ವಿರಾಟ್ ಆನೆ ಬಹಳ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು ಎಂದು ತಿಳಿದು ಬಂದಿದೆ.
ಅರ್ಜುನ ಸಾವಿನ ಇಂಚಿಂಚು ಮಾಹಿತಿ ಬಿಚ್ಚಿಟ್ಟ ವೈದ್ಯ ರಮೇಶ್: ಇಲ್ಲಿದೆ ನೋಡಿ ಅರ್ಜುನನ ಕೊಂದ ಕಾಡಾನೆ
ಚಿಕಿತ್ಸೆಗೆ ಸ್ಪಂದಿಸದೆ ಆನೆ ಸಾವನ್ನಪ್ಪಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನ ನಡೆಸಿದ್ದಾರೆ. ನಂತರ ಅಂತ್ಯಕ್ರಿಯೆ ನಡೆಸಲಾಗಿದೆ.
