ಬನಶಂಕರಿಯ ವಿದ್ಯುತ್‌ ಚಿತಾಗಾರದ ಸಿಬ್ಬಂದಿ ಹೊರ ಆವರಣದಲ್ಲಿ ಪಿಪಿಇ ಕಿಟ್‌ ಹಾಗೂ ಗ್ಲೌಸ್‌ ಎಸೆಯುವ ಮೂಲಕ ತಮ್ಮ ಬೇಜವಾಬ್ದಾರಿ ಪ್ರದರ್ಶನ| ಪಿಪಿಇ ಕಿಟ್‌ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದ ಪಾಲಿಕೆ ಅಥವಾ ಚಿತಾಗಾರದ ಉಸ್ತುವಾರಿಗಳು| 

ಬೆಂಗಳೂರು(ಏ.18): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯುತ್‌ ಚಿತಾಗಾರಗಳಲ್ಲಿ ಮೃತದೇಹ ಅಂತ್ಯಸಂಸ್ಕಾರದ ವೇಳೆ ಚಿತಾಗಾರದ ಸಿಬ್ಬಂದಿ ಹಾಗೂ ಮೃತರ ಕಡೆಯವರು ಧರಿಸುವ ಪಿಪಿಇ ಕಿಟ್‌ ಹಾಗೂ ಗ್ಲೌಸ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವ ಘಟನೆ ಮರುಕಳಿಸುತ್ತಿವೆ.

Add Asianetnews Kannada as a Preferred SourcegooglePreferred

ಬನಶಂಕರಿಯ ವಿದ್ಯುತ್‌ ಚಿತಾಗಾರದ ಸಿಬ್ಬಂದಿ ಶುಕ್ರವಾರವೂ ಪಿಪಿಇ ಕಿಟ್‌ ಹಾಗೂ ಗ್ಲೌಸ್‌ಗಳನ್ನು ಚಿತಾಗಾರದ ಹೊರ ಆವರಣದಲ್ಲಿ ಬಿಸಾಡಿದ್ದರು. ಶನಿವಾರವೂ ಸಹ ತಮ್ಮ ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ.

ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

ಕೋವಿಡ್‌ ಮೃತರ ಅಂತ್ಯಸಂಸ್ಕಾರದ ವೇಳೆ ಪೂಜೆ ಸಲ್ಲಿಸಲು ಕುಟುಂಬದ ಸದಸ್ಯರು ಪಿಪಿಇ ಕಿಟ್‌ ಧರಿಸುತ್ತಿದ್ದಾರೆ. ಅಂತ್ಯಕ್ರಿಯೆ ಮುಗಿದ ಬಳಿಕ ಚಿತಾಗಾರದ ಆವರಣದಲ್ಲಿ ಪಿಪಿಇ ಕಿಟ್‌, ಗ್ಲೌಸ್‌ ಕಳಚಿ ಎಸೆದು ಹೋಗುತ್ತಿದ್ದಾರೆ. ಪಾಲಿಕೆ ಅಥವಾ ಚಿತಾಗಾರದ ಉಸ್ತುವಾರಿಗಳು ಈ ಪಿಪಿಇ ಕಿಟ್‌ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದ ಪರಿಣಾಮ ಇದು ಮರುಕಳಿಸುತ್ತಿದೆ.