ಆಶಾ ಕಾರ್ಯಕರ್ತರಿಗೆ 3 ಸಾವಿರ ಪ್ರೋತ್ಸಾಹ ಧನ| ಬಮೂಲ್ ಆಡಳಿತ ಮಂಡಳಿ ನಿರ್ಧಾರ| ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರು.ಪ್ರೋತ್ಸಾಹ ಧನ ನೀಡುವಂತೆ ಬಮೂಲ್ಗೆ ಮನವಿ ಮಾಡಿದ್ದ ಸಂಸದ ಡಿ.ಕೆ.ಸುರೇಶ್|
ಮಾಗಡಿ(ಏ.19): ಕೊರೋನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ಸೇವೆಯಲ್ಲಿ ತೊಡಗಿರುವ 2338 ಮಂದಿ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನವಾಗಿ ತಲಾ 3 ಸಾವಿರ ನೀಡಲು ಬಮೂಲ್ ಆಡಳಿತ ಮಂಡಳಿ ನಿರ್ಧರಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಸದ ಡಿ.ಕೆ.ಸುರೇಶ್ ಅವರು ಬಮೂಲ್ ಆಡಳಿತ ಮಂಡಳಿಗೆ ಪತ್ರ ಬರೆದು ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರು.ಪ್ರೋತ್ಸಾಹ ಧನ ನೀಡುವಂತೆ ಮನವಿ ಮಾಡಿದ್ದರು.
ಪ್ರಾಣವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸ್ವಾಗತ
ಈ ಹಿನ್ನೆಲೆಯಲ್ಲಿ ಬಮೂಲ್ ಆಡಳಿತ ಮಂಡಳಿ ಸಭೆ ನಡೆಸಿ ತಲಾ 3 ಸಾವಿರ ರು. ಪ್ರೋತ್ಸಾಹ ಧನ ನೀಡಲು ನಿರ್ಣಯ ಕೈಗೊಂಡಿದೆ. ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಬೆಂಗಳೂರು ನಗರದ 687, ಬೆಂಗಳೂರು ಗ್ರಾಮಾಂತರದ 782 ಹಾಗೂ ರಾಮನಗರ ಜಿಲ್ಲೆಯ 869 ಆಶಾ ಕಾರ್ಯಕರ್ತರಿಗೆ ಈ ಪ್ರೋತ್ಸಾಹ ಧನ ಸಿಗಲಿದೆ.
