* ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿ* ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ*  ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಅವಕಾಶ 

ಚಿಕ್ಕಬಳ್ಳಾಪುರ(ಜು.14): ನಂದಿಗಿರಿಧಾಮ ವೀಕ್ಷಣೆಗೆ ವಾರಾಂತ್ಯದಲ್ಲಿ ನಿಷೇಧ ಹೇರಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ನೆರೆ ಹೊರೆ ಜಿಲ್ಲೆಗಳಿಂದ ಪ್ರವಾಸಿಗರ ದಟ್ಟಣೆ ಹೆಚ್ಚಾಗಿತ್ತು. ಆದರೆ ಜನರು ಕೊರೋನಾ ನಿಯಮ ಪಾಲಿಸಲು ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿಯಾಗಿತ್ತು. 

ವೀಕೆಂಡ್ ಹಿನ್ನೆಲೆ : ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು

ಹೀಗಾಗಿ ಜಿಲ್ಲಾಡಳಿತವು ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಲಭ್ಯವಿದೆ.