ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಕಾರಣ, ನ್ಯಾಯಾಲಯದ ಆದೇಶದ ಮೇರೆಗೆ ರೈತರು ಹುಬ್ಬಳ್ಳಿಯಲ್ಲಿರುವ ನೈಋತ್ಯ ರೈಲ್ವೆ ಕನಸ್ಟ್ರಕ್ಷನ್ ವಿಭಾಗದ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. 2017ರಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡಲು ಕೋರ್ಟ್ ಆದೇಶಿಸಿದ್ದರೂ ರೈಲ್ವೆ ಇಲಾಖೆ ಪಾಲಿಸಿರಲಿಲ್ಲ.

ಹುಬ್ಬಳ್ಳಿ: ರೈಲ್ವೆ ನಿಲ್ದಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ಪಾವತಿಸದ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕ ಕಚೇರಿ ವ್ಯಾಪ್ತಿಯ ಕನಸ್ಟ್ರಕ್ಷನ್ ವಿಭಾಗದ ಕಚೇರಿಯ ಪೀಠೋಪಕರಣಗಳನ್ನು ರೈತರು ಕೋರ್ಟ್ ಆದೇಶದಂತೆ ವಶಪಡಿಸಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

2017ರಲ್ಲಿ ರೈಲ್ವೆಯು ಭೂ ಸ್ವಾಧೀನ

ಗಂಗಾವತಿ ತಾಲೂಕು ಕಲಗುಡಿ ಗ್ರಾಮದ 16 ರೈತರ 12.5 ಎಕರೆಯನ್ನು ರೈಲ್ವೆ ನಿಲ್ದಾಣಕ್ಕೆ 2017ರಲ್ಲಿ ರೈಲ್ವೆಯು ಭೂ ಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಕೃಷಿಭೂಮಿ ಎಂದು ಎಕರೆಗೆ 18 ಲಕ್ಷ ರೂ. ಪರಿಹಾರ ಪ್ರಕಟಿಸಿತ್ತು. ಆದರೆ, ಇದು ಕೃಷಿ ಭೂಮಿಯಲ್ಲ ಕೃಷಿಯೇತರ ಭೂಮಿ ವ್ಯಾಪ್ತಿಗೊಳಪಡುತ್ತದೆ. ಹಾಗಾಗಿ ಕೃಷಿಯೇತರ ಭೂಮಿ ಬೆಲೆಯ ಪರಿಹಾರ ನೀಡುವಂತೆ ರೈತರು ಕೋರಿ ರೈತರು ಕೊಪ್ಪಳ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿತ್ತು, ಕೋರ್ಟ್ ಚದುರ ಅಡಿಗೆ 800 ರೂ.ಗಳಂತೆ ಪರಿಹಾರ ನೀಡುವಂತೆ ರೈತರ ಪರ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರೈಲ್ವೆಯು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿತ್ತು. ಆದರೆ, ಕೋರ್ಟ್ ಪರಿಹಾರ ಮೊತ್ತದ ಶೇ.50ರಷ್ಟನ್ನು ಠೇವಣಿ ಇಡುವಂತೆ ನಿರ್ದೇಶಿಸಿತ್ತು. ಅದನ್ನು ರೈಲ್ವೆ ಪಾಲಿಸಲಿಲ್ಲ.

ಹುಬ್ಬಳ್ಳಿಯ 5ನೇ ಜಿಲ್ಲಾ ನ್ಯಾಯಾಲಯದ ಮೂಲಕ ಎಕ್ಸಿಕ್ಯುಷನ್ ಕೇಸ್‌ನಲ್ಲಿ ಜಪ್ತಿ ಆದೇಶ

ಹೀಗಾಗಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ರೈತರು ಒತಾಯಿಸಿದ್ದರು. ಈ ವೇಳೆ ಮೂರು ಬಾರಿ ಕಾಲಾವಕಾಶ ಕೇಳಿದ್ದ ರೈಲ್ವೆಯು ಪರಿಹಾರ ನೀಡಲಿಲ್ಲ. ಅಂತಿಮವಾಗಿ ಅನುಷ್ಠಾನ ವಿಳಂಬವಾಗಿದ್ದು, ಕ್ರಮಕೈಗೊಳ್ಳುವಂತೆ ರೈತರು ಮತ್ತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೈಲ್ವೆ ಕಚೇರಿ ಹುಬ್ಬಳ್ಳಿಯಲ್ಲಿರುವ ಕಾರಣಕ್ಕೆ ಹುಬ್ಬಳ್ಳಿಯ 5ನೇ ಜಿಲ್ಲಾ ನ್ಯಾಯಾಲಯದ ಮೂಲಕ ಎಕ್ಸಿಕ್ಯುಷನ್ ಕೇಸ್‌ನಲ್ಲಿ ಜಪ್ತಿ ಆದೇಶ ಪಡೆದುಕೊಂಡು ರೈಲ್ವೆ ಕನಸ್ಟ್ರಕ್ಷನ್ ಕಚೇರಿ ಕಂಪ್ಯೂಟರ್ ಸೇರಿದಂತೆ ಪೀಠೋಪಕರಣ ಜಪ್ತಿ ಮಾಡಲಾಯಿತು ಎಂದು ನ್ಯಾಯವಾದಿ ಎಸ್.ಎಚ್. ಸುರಪುರ ತಿಳಿಸಿದ್ದಾರೆ.