ನೇತ್ರಾವತಿ ಹಾಗೂ ಮೃತ್ಯುಂಜಯ ನದಿಯಲ್ಲಿ ನೀರಿನ ಮಟ್ಟ ಏರಿಕೆ| ಕಳೆದ ಬಾರಿ ನೆರೆ ಸಂದರ್ಭ ನದಿಯಲ್ಲಿ ಮರಳು ಹಾಗೂ ಕಸಕಡ್ಡಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಸಲದ ಮಳೆಗೆ ನೆರೆ ಬರಲು ಕಾರಣವಾಗಬಹುದು ಎಂದು ಜನರ ಇನ್ನಷ್ಟು ಆತಂಕ|
ಬೆಳ್ತಂಗಡಿ(ಜೂ.08): ತಾಲೂಕಿನ ದಿಡುಪೆ, ಕಿಲ್ಲೂರು, ಕುಕ್ಕಾವು ಮಿತ್ತಬಾಗಿಲು, ಮಲವಂತಿಗೆ ಭಾಗದಲ್ಲಿ ಶನಿವಾರ ಸಂಜೆ ಸತತ ಮಳೆ ಬಿದ್ದ ಪರಿಣಾಮ ನದಿಗಳು ಉಕ್ಕಿ ಹರಿದಿವೆ.
Add Asianetnews Kannada as a Preferred Source

ನೇತ್ರಾವತಿ ಹಾಗೂ ಮೃತ್ಯುಂಜಯ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಜನರು ನೆರೆ ಭೀತಿಯ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಇದೇ ರೀತಿ ಮಳೆ ಬಂದು ತಗ್ಗು ಪ್ರದೇಶಗಳೆಲ್ಲ ನೀರಿನಿಂದ ಮುಳುಗಿದ್ದು ಕಳೆದ ವರ್ಷದ ನೆರೆಯನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ.
ದಕ್ಷಿಣ ಕನ್ನಡ: ಕೊರೋನಾ ಸಮಯದಲ್ಲಿ 40 ಡೆಂಘೀ ಕೇಸ್!
ಕಳೆದ ಬಾರಿ ನೆರೆ ಸಂದರ್ಭ ನದಿಯಲ್ಲಿ ಮರಳು ಹಾಗೂ ಕಸಕಡ್ಡಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಸಲದ ಮಳೆಗೆ ನೆರೆ ಬರಲು ಕಾರಣವಾಗಬಹುದು ಎಂದು ಜನರು ಇನ್ನಷ್ಟು ಆತಂಕ ಪಡುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇದೊಂದು ಕಾರಣವಾಗಬಹುದು ಎಂದು ಜನರಾಡಿಕೊಳ್ಳುತ್ತಿದ್ದಾರೆ. ಭಾನುವಾರ ಬೆಳಗ್ಗೆ ನೆರೆ ನೀರು ಸಂಪೂರ್ಣ ಇಳಿದಿರುವುದು ಕಂಡು ಬಂದಿದೆ.
