ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ| ಕಾಶಪ್ಪನವರ ಸೇರಿ ನಾಲ್ವರ ವಿರುದ್ಧ ಕೇಸ್| ಕಾಶಪ್ಪನವರ ವಿರುದ್ಧ ದೂರು ದಾಖಲಿಸಿದ ಹುನಗುಂದ ಸಿಪಿಐ ಅಯ್ಯನಗೌಡ ಪಾಟೀಲ್| 

ಬಾಗಲಕೋಟೆ(ಡಿ.19): ಜಿಲ್ಲೆಯ ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಇಳಕಲ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ಪ್ರಕರಣ ದಾಖಲಾಗಿದೆ. ಪೋಲಿಸರ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ. 

Add Asianetnews Kannada as a Preferred SourcegooglePreferred

ಕಾಶಪ್ಪನವರ ವಿರುದ್ಧ ಹುನಗುಂದ ಸಿಪಿಐ ಅಯ್ಯನಗೌಡ ಪಾಟೀಲ್ ಅವರು ದೂರು ದಾಖಲಿಸಿದ್ದಾರೆ. ಇಲಕಲ್ ಠಾಣೆಯಲ್ಲಿ 143, 147,353, 504,506 ಕಲಂ ಅಡಿಯಲ್ಲಿ ಕೇಸ್ ದಾಖಲಾಗಿದೆ. 

ಕೊಲೆ ಬೆದರಿಕೆ ಕರೆ: ಹುನಗುಂದ ಮಾಜಿ ಶಾಸಕ ಕಾಶಪ್ಪನವರ

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 9 ಜನರಿಗೆ ನಿರೀಕ್ಷಣಾ ಜಾಮೀನು ಆದೇಶ ನೀಡಲು ಹೋದ ವೇಳೆ ವಿಜಯಾನಂದ ಕಾಶಪ್ಪನವರ ಪೋಲಿಸರಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿ ಪಡಿಸಿದ್ದರು ಎಂದು ಆರೋಪಿಸಲಾಗಿದೆ.
ಜಾಮೀನು ಪಡೆದ 9 ಜನರಿಗೂ ನೋಟಿಸ್ ಪಡೆಯದಂತೆ ಹೇಳಿ ಸಹಕಾರ ನೀಡದಿರುವಂತೆ ಕಾಶಪ್ಪನವರ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಮಾಜಿ ಶಾಸಕ ಕಾಶಪ್ಪನವರ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ.