ಸಚಿವ ಶ್ರೀ ರಾಮುಲು ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಚಿವರ ಬಳ್ಳಾರಿ ನಿವಾಸದಲ್ಲಿ ಏಕಾ ಏಕಿ ಅಗ್ನಿ ದುರಂತವಾಗಿದೆ
ಬಳ್ಳಾರಿ (ಡಿ.09) : ನಗರದ ಹವಾಂಭಾವಿ ಪ್ರದೇಶದಲ್ಲಿನ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ನಿವಾಸದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸಕ್ರ್ಯೂಟ್ನಿಂದ ಮನೆಯ ಹೊರಭಾಗದಲ್ಲಿದ್ದ ಜನರೇಟರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಡೀಸೆಲ್ ಟ್ಯಾಂಕರ್ಗೆ ಆವರಿಸಿದೆ.
ಈ ವೇಳೆ ಕೆಲಹೊತ್ತು ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುತೂಹಲ ಮೂಡಿಸಿದೆ ರಾಮುಲು ಸಭೆ : ಹೊಸ ಪ್ಲಾನ್ ಮಾಡಿದ್ರಾ ಸಚಿವರು ...
ಶ್ರೀರಾಮುಲು ಅವರು ಈ ಹಿಂದೆ ಸಂಸದರಾಗಿದ್ದ, 2017ರ ಡಿಸೆಂಬರ್ ತಿಂಗಳಲ್ಲಿ ದೆಹಲಿಯ ಫಿರೋಜ್ ಶಾ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಶ್ರೀರಾಮುಲು ಮಲಗಿದ್ದ ಕೋಣೆಯಲ್ಲೇ ನಡೆದ ಅಗ್ನಿ ದುರಂತದಲ್ಲಿ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 9, 2020, 7:10 AM IST