ಚಾಲಕ ಎಪಿಎಂಸಿ ಆವರಣದಲ್ಲಿ ಕಾರು ನಿಲ್ಲಿಸಿ ಊಟಕ್ಕೆ ಹೋಗಿದ್ದರು. MH 10 cx 4888 ಮಹಾರಾಷ್ಟ್ರ ಮೂಲದ ಕಾರು ಇದಾಗಿದೆ. ಚಾಲಕ ಊಟಕ್ಕೆ ಹೋಗಿದ್ದ ವೇಳೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.  ಕಾರು ಚಾಲಕ ಬಚಾವ್ ಆಗಿದ್ದಾನೆ. 

ಬಾಗಲಕೋಟೆ(ಡಿ.11): ನಿಂತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದ ಕಾರು ಹೊತ್ತಿ ಉರಿದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ಇಂದು(ಬುಧವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಚಾಲಕ ಎಪಿಎಂಸಿ ಆವರಣದಲ್ಲಿ ಕಾರು ನಿಲ್ಲಿಸಿ ಊಟಕ್ಕೆ ಹೋಗಿದ್ದರು. MH 10 cx 4888 ಮಹಾರಾಷ್ಟ್ರ ಮೂಲದ ಕಾರು ಇದಾಗಿದೆ. ಚಾಲಕ ಊಟಕ್ಕೆ ಹೋಗಿದ್ದ ವೇಳೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಕಾರು ಚಾಲಕ ಬಚಾವ್ ಆಗಿದ್ದಾನೆ. 

ಮೈಮೇಲೆ ಬಿದ್ದ ಲಾಠಿ ಏಟು ಪಂಚಮಸಾಲಿ ಸಮಾಜ ಎಂದೂ ಮರೆಯೋಲ್ಲ: ಸಿದ್ದರಾಮಯ್ಯ ಸರ್ಕಾರಕ್ಕೆ ನಿರಾಣಿ ಎಚ್ಚರಿಕೆ

ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾಂಟ್ರ್ಯಾಕ್ಟರ್ ಶಿವು ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಘಟನಾ ಸ್ಥಳಕ್ಕೆ ಲೋಕಾಪುರ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲೋಕಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.