ಕಸಕ್ಕೆ ಹಚ್ಚಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿದ್ದು, ಸಾಕಷ್ಟು ಗಿಡಗಳಿಗೆ ಹಾನಿ| ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ| ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ|
ಮುಂಡಗೋಡ(ಫೆ.15): ಪಟ್ಟಣದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹಾನಿ ಸಂಭವಿಸಿದೆ.
Add Asianetnews Kannada as a Preferred Source

ಮುಂಡಗೋಡ ಅರಣ್ಯ ಸರ್ವೇ ನಂ 186ರಲ್ಲಿ ಕಸಕ್ಕೆ ಹಚ್ಚಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹೊತ್ತಿಕೊಂಡಿದ್ದು, ಸಾಕಷ್ಟು ಗಿಡಗಳಿಗೆ ಹಾನಿಯುಂಟಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮುಂಡಗೋಡ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಮುಂದಾಗಬಹುದಾದ ಮತ್ತಷ್ಟು ಅನಾಹುತ ತಪ್ಪಿಸಿದ್ದಾರೆ.
ಅಂಕೋಲಾ: ಬೈಕ್ ಅಪಘಾತ-ತಾಯಿ, ಮಗ ಸ್ಥಳದಲ್ಲೇ ಸಾವು
ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನಾರಾಯಣ ತಳೇಕರ, ಸಪ್ನಿಲ್ ಪೆಡ್ನೇಕರ, ಅಡಿವೆಪ್ಪ ಕುರುವಿನಕೊಪ್ಪ, ದುರ್ಗಪ್ಪ ಹರಿಜನ, ಗುರುಪ್ರಸಾದ ಕಮಲಾಕರ, ಪರಶುರಾಮ ಮಟ್ಟಿಮನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
