ಮಂಗಳೂರು: ಅಲೆಗಳ ರಭಸಕ್ಕೆ ಮೀನುಗಾರಿಕಾ ಬೋಟ್ ಮುಳುಗಡೆ
ಮಂಗಳೂರು ಮೂಲದ ಮೀನುಗಾರಿಕಾ ಬೋಟ್ ಭಾನುವಾರ ಮುಂಜಾನೆ ಮುರುಡೇಶ್ವರ ಸಮೀಪದ ನೇತ್ರಾಣಿಗುಡ್ಡದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 10 ಆಂಧ್ರ ಮೂಲದ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅಲೆಗಳ ರಭಸಕ್ಕೆ ಬೋಟ್ ಮುಳುಗಿರುವುದಾಗಿ ತಿಳಿದುಬಂದಿದೆ.
ಮಂಗಳೂರು(ಸೆ.09): ಮಂಗಳೂರು ಮೂಲದ ಮೀನುಗಾರಿಕಾ ಬೋಟ್ ಭಾನುವಾರ ಮುಂಜಾನೆ ಮುರುಡೇಶ್ವರ ಸಮೀಪದ ನೇತ್ರಾಣಿಗುಡ್ಡದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆಂಧ್ರ ಮೂಲದ 10 ಕಾರ್ಮಿಕರನ್ನು ರಕ್ಷಿಸಲಾಗಿದೆ.
ಮಂಗಳೂರಿನ ಕಸಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬವರಿಗೆ ಸೇರಿದ ‘ಸಹೀಮಾ’ ಹೆಸರಿನ ಬೋಟ್ ಇದಾಗಿದೆ. ವಾರದ ಹಿಂದೆ ಮಂಗಳೂರಿನಿಂದ ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಆದರೆ ನೇತ್ರಾಣಿಗುಡ್ಡದ ಸಮೀಪ ಇರುವಾಗ ಕಡಲು ಭಾರಿ ಪ್ರಕ್ಷುಬ್ಧಗೊಂಡಿದ್ದರಿಂದ ಬೋಟಿನಲ್ಲಿದ್ದ ಉಪಕರಣ ಬಳಸಿ ಅಲ್ಲೇ ನಿಲುಗಡೆ ಮಾಡಲಾಗಿತ್ತು. ಆದರೆ ಭಾನುವಾರ ಮುಂಜಾನೆ ವೇಳೆಗೆ ಬೋಟು ಕಡಲಲೆಗಳ ರಭಸಕ್ಕೆ ನೀರಿನಲ್ಲಿ ಮುಳುಗಿದೆ.
ನನ್ನ ವಿರುದ್ಧದ ಆರೋಪಗಳಿಗೆ ಉತ್ತರಿಸುವುದಿಲ್ಲ: ಸೆಂಥಿಲ್
ಬೋಟು ಮುಳುಗಡೆಯಾಗುವುದಕ್ಕೆ ಮೊದಲು ಅದರಲ್ಲಿದ್ದ 10 ಮೀನುಗಾರರನ್ನು ಇತರ ಬೋಟಿನವರು ರಕ್ಷಣೆ ಮಾಡಿದ್ದಾರೆ. ಈ ಅವಘಡದಿಂದ ಸುಮಾರು ಒಂದೂವರೆ ಕೋಟಿ ರು. ನಷ್ಟಉಂಟಾಗಿದೆ. ಪೊಲೀಸ್ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಂಗಳೂರು: ಸೆಂಥಿಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು..?