ಮಂಗಳೂರು ಮೂಲದ ಮೀನುಗಾರಿಕಾ ಬೋಟ್ ಭಾನುವಾರ ಮುಂಜಾನೆ ಮುರುಡೇಶ್ವರ ಸಮೀಪದ ನೇತ್ರಾಣಿಗುಡ್ಡದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 10 ಆಂಧ್ರ ಮೂಲದ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅಲೆಗಳ ರಭಸಕ್ಕೆ ಬೋಟ್ ಮುಳುಗಿರುವುದಾಗಿ ತಿಳಿದುಬಂದಿದೆ.
ಮಂಗಳೂರು(ಸೆ.09): ಮಂಗಳೂರು ಮೂಲದ ಮೀನುಗಾರಿಕಾ ಬೋಟ್ ಭಾನುವಾರ ಮುಂಜಾನೆ ಮುರುಡೇಶ್ವರ ಸಮೀಪದ ನೇತ್ರಾಣಿಗುಡ್ಡದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆಂಧ್ರ ಮೂಲದ 10 ಕಾರ್ಮಿಕರನ್ನು ರಕ್ಷಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಗಳೂರಿನ ಕಸಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬವರಿಗೆ ಸೇರಿದ ‘ಸಹೀಮಾ’ ಹೆಸರಿನ ಬೋಟ್ ಇದಾಗಿದೆ. ವಾರದ ಹಿಂದೆ ಮಂಗಳೂರಿನಿಂದ ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಆದರೆ ನೇತ್ರಾಣಿಗುಡ್ಡದ ಸಮೀಪ ಇರುವಾಗ ಕಡಲು ಭಾರಿ ಪ್ರಕ್ಷುಬ್ಧಗೊಂಡಿದ್ದರಿಂದ ಬೋಟಿನಲ್ಲಿದ್ದ ಉಪಕರಣ ಬಳಸಿ ಅಲ್ಲೇ ನಿಲುಗಡೆ ಮಾಡಲಾಗಿತ್ತು. ಆದರೆ ಭಾನುವಾರ ಮುಂಜಾನೆ ವೇಳೆಗೆ ಬೋಟು ಕಡಲಲೆಗಳ ರಭಸಕ್ಕೆ ನೀರಿನಲ್ಲಿ ಮುಳುಗಿದೆ.
ನನ್ನ ವಿರುದ್ಧದ ಆರೋಪಗಳಿಗೆ ಉತ್ತರಿಸುವುದಿಲ್ಲ: ಸೆಂಥಿಲ್
ಬೋಟು ಮುಳುಗಡೆಯಾಗುವುದಕ್ಕೆ ಮೊದಲು ಅದರಲ್ಲಿದ್ದ 10 ಮೀನುಗಾರರನ್ನು ಇತರ ಬೋಟಿನವರು ರಕ್ಷಣೆ ಮಾಡಿದ್ದಾರೆ. ಈ ಅವಘಡದಿಂದ ಸುಮಾರು ಒಂದೂವರೆ ಕೋಟಿ ರು. ನಷ್ಟಉಂಟಾಗಿದೆ. ಪೊಲೀಸ್ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
