ಗಂಭೀರವಾಗಿ ಗಾಯಗೊಂಡಿರುವ 16 ಮಂದಿಯ ಪೈಕಿ 8 ಜನರ ಸ್ಥಿತಿ ಚಿಂತಾಜನಕ| ತಮಿಳುನಾಡು, ಕರ್ನಾಟಕ ಗಡಿ ಭಾಗದಲ್ಲಿರುವ ದಬ್ಬಗುಳೇಶ್ವರ ದೇವರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರು|
ರಾಮನಗರ/ಕನಕಪುರ(ಡಿ.22): ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ದೇವರ ದರ್ಶನಕ್ಕೆ ತೆರಳುತ್ತಿದ್ದ ಕನಕಪುರ ಮೂಲದ ಐವರು ಮಹಿಳೆಯರು ಮೃತಪಟ್ಟು, 16 ಮಂದಿ ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ತಮಿಳುನಾಡು, ಕರ್ನಾಟಕದ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ.
Add Asianetnews Kannada as a Preferred Source

ಕನಕಪುರ ತಾಲೂಕು ಕೆರಳಾಳುಸಂದ್ರ ಗ್ರಾಮದ ಪುಟ್ಟಲಿಂಗಮ್ಮ(60), ಹೊಸಬೊಮ್ಮ(60), ಗೌರಮ್ಮ(75), ಮಂಗಳಮ್ಮ(25), ಈರಮ್ಮ(85) ಮೃತರು. ಗಂಭೀರವಾಗಿ ಗಾಯಗೊಂಡಿರುವ 16 ಮಂದಿಯ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ.
ಜಾಲಿರೈಡ್ ಹೋಗಿದ್ದ ಮೂವರು ಯುವಕರ ದುರಂತ ಸಾವು
ಕೆರಳಾಳುಸಂದ್ರ ಗ್ರಾಮದ ಸುಮಾರು 25 ಮಂದಿ ಸೋಮವಾರ ಬೆಳಗ್ಗೆ ತಮಿಳುನಾಡು, ಕರ್ನಾಟಕ ಗಡಿ ಭಾಗದಲ್ಲಿರುವ ದಬ್ಬಗುಳೇಶ್ವರ (ದಬ್ಬಗುಳಿಯ ಬಸವೇಶ್ವರ) ದೇವರ ದರ್ಶನಕ್ಕೆ ತೆರಳುತ್ತಿದ್ದರು. ದೇವಸ್ಥಾನಕ್ಕೆ 4 ಕಿ.ಮೀ. ದೂರವಿದ್ದಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಮೂರು ಸುತ್ತು ಪಲ್ಟಿ ಹೊಡೆದಿದೆ.
