ಬೆಳಗಾವಿ ನೆರೆ ಸಂತ್ರಸ್ತರ ಕೇಂದ್ರದಲ್ಲಿ ಹಿಂದು, ಮುಸ್ಲಿಂರು ಒಂದಾಗಿ ರಕ್ಷಾ ಬಂಧನ ಆಚರಿಸಿದರು. ಮನೆ, ತೋಟ ಎಲ್ಲವನ್ನೂ ಕಳೆದುಕೊಂಡಿದ್ದರೂ ಕೇಂದ್ರದಲ್ಲಿದ್ದ ಮಹಿಳೆಯರು ಪುರುಷರನ್ನು ಸಾಲಾಗಿ ಕೂರಿಸಿ ರಾಖಿ ಕಟ್ಟಿ ಸಹೋದರ ಸಂಬಂಧ ಎತ್ತಿ ಹಿಡಿಯುವ ಹಬ್ಬವನ್ನು ಸರಳವಾಗಿ ಆಚರಿಸಿದರು.

ಬೆಳಗಾವಿ(ಆ.16): ನೆರೆ ಸಂತ್ರಸ್ತರ ಕೇಂದ್ರದಲ್ಲಿ ಹಿಂದು, ಮುಸ್ಲಿಂರು ಒಂದಾಗಿ ರಕ್ಷಾ ಬಂಧನ ಆಚರಿಸಿದರು. ಮನೆ, ತೋಟ ಎಲ್ಲವನ್ನೂ ಕಳೆದುಕೊಂಡಿದ್ದರೂ ಕೇಂದ್ರದಲ್ಲಿದ್ದ ಮಹಿಳೆಯರು ಪುರುಷರನ್ನು ಸಾಲಾಗಿ ಕೂರಿಸಿ ರಾಖಿ ಕಟ್ಟಿ ಸಹೋದರ ಸಂಬಂಧ ಎತ್ತಿ ಹಿಡಿಯುವ ಹಬ್ಬವನ್ನು ಸರಳವಾಗಿ ಆಚರಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಕಷ್ಟದಲ್ಲೂ ಹಿಂದೂ ಮುಸ್ಲಿಂ ಬಾಂಧವರು ರಕ್ಷಾ ಬಂಧನ ಆಚರಣೆ ಮಾಡಿದ್ದಾರೆ. ಪರಿಹಾರ ಕೇಂದ್ರದಲ್ಲಿರಾಖಿ ಹಬ್ಬ ಆಚರಣೆ ಮಾಡಿ ಸಹೋದರ ಸಂಬಂಧ ವೃದ್ದಿಸಿಕೊಂಡರು.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದಲ್ಲಿ ಪರಿಹಾರ ಕೇಂದ್ರದಲ್ಲಿ ಪುರುಷರನ್ನು ಸಾಲಾಗಿ ಕೂರಿಸಿ ಸಹೋದರಿಯರು ರಾಖಿ ಕಟ್ಟಿ ಸಿಹಿ ತಿನ್ನಿಸಿದರು. ಸಮಸ್ಯೆ ಆಲಿಸಲು ಬಂದ ಶಾಸಕ ಸತೀಶ್ ಜಾರಕಿಹೊಳಿಗೂ ನೆರೆ ಸಂತ್ರಸ್ತರು ರಾಖಿ ಕಟ್ಟಿದರು.