ಸಿದ್ದರಾಮಯ್ಯ ಎಸ್ಕಾರ್ಟ್ ಕಾರು ಅಪಘಾತ: ಹೃದಯಘಾತದಿಂದ ARSI ಸಾವು
ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಹೃದಯಘಾತದಿಂದ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.
ಮಂಡ್ಯ, (ಜ.9): ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ಅಪಘಾತಕ್ಕೀಡಾಗಿದೆ.
ಸರಣಿ ಅಪಘಾತದ ಪರಿಣಾಮ ಎಸ್ಕಾರ್ಟ್ ವಾಹನದಲ್ಲಿದ್ದ ARSI ಮರೀಗೌಡ(56) ಆತಂಕಗೊಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂದು [ಬುಧವಾರ] ಬೆಳಗ್ಗೆ ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ವೇಳೆ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆ ನೋಡಿ ಬೆಂಗಾವಲು ವಾಹನ ಸಂಖ್ಯೆ ಕೆಎ 11 ಜಿ 591ರಲ್ಲಿದ್ದ ಮರೀಗೌಡ ಅವರು ಹೃದಯಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೂರು ಪೊಲೀಸ್ ವಾಹನಗಳು ಹಾಗೂ ಎರಡು ಖಾಸಗಿ ವಾಹನಗಳು ಜಖಂಗೊಂಡಿವೆ.