Asianet Suvarna News Asianet Suvarna News

ಸಿದ್ದರಾಮಯ್ಯ ಎಸ್ಕಾರ್ಟ್ ಕಾರು ಅಪಘಾತ: ಹೃದಯಘಾತದಿಂದ ARSI ಸಾವು

ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಹೃದಯಘಾತದಿಂದ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

Former CM  Siddaramaiah Escort Vehicle Accident Near Srirangapatna
Author
Bengaluru, First Published Jan 9, 2019, 8:46 PM IST

ಮಂಡ್ಯ, (ಜ.9): ಮೈಸೂರಿಗೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಗೇಟ್ ಬಳಿ ಅಪಘಾತಕ್ಕೀಡಾಗಿದೆ.

ಸರಣಿ ಅಪಘಾತದ ಪರಿಣಾಮ ಎಸ್ಕಾರ್ಟ್ ವಾಹನದಲ್ಲಿದ್ದ  ARSI ಮರೀಗೌಡ(56) ಆತಂಕಗೊಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು [ಬುಧವಾರ] ಬೆಳಗ್ಗೆ ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ವೇಳೆ ಸರಣಿ ಅಪಘಾತ ಸಂಭವಿಸಿದೆ.

ಈ ಘಟನೆ ನೋಡಿ ಬೆಂಗಾವಲು ವಾಹನ ಸಂಖ್ಯೆ ಕೆಎ 11 ಜಿ 591ರಲ್ಲಿದ್ದ ಮರೀಗೌಡ ಅವರು ಹೃದಯಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೂರು ಪೊಲೀಸ್ ವಾಹನಗಳು ಹಾಗೂ ಎರಡು ಖಾಸಗಿ ವಾಹನಗಳು ಜಖಂಗೊಂಡಿವೆ.

Follow Us:
Download App:
  • android
  • ios