Asianet Suvarna News Asianet Suvarna News

ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ: ಈಶ್ವರಪ್ಪ

ರಾಜ್ಯ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆ ಮಾಡಿ ಎರಡ್ಮೂರು ತಿಂಗಳಾದರೂ ಇದುವರೆಗೂ ರೈತರಿಗೆ ನೈಯಾಪೈಸೆ ಬರ ಪರಿಹಾರ ನೀಡಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರೈತರಿಗೆ ಎಲ್ಲಿಂದ ಪರಿಹಾರ ನೀಡುತ್ತಾರೆ? ಇಂತಹ ಭ್ರಷ್ಟ ಸರ್ಕಾರ ಬಹಳ ದಿನ ರಾಜ್ಯದಲ್ಲಿ ಉಳಿಯುವುದಿಲ್ಲ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ 

Former DCM KS Eshwarappa Slams Karnataka Congress Government grg
Author
First Published Nov 9, 2023, 6:22 AM IST

ಯಲಬುರ್ಗಾ(ನ.09):  ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ. ಈ ಸರ್ಕಾರ ರೈತರ ಪಾಲಿಗೆ ಇದ್ದು ಸತ್ತಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ತಾಲೂಕಿನ ಹಿರೇಅರಳಿಹಳ್ಳಿ, ಹೊಸೂರು, ಬೇವೂರು ಗ್ರಾಮಗಳ ರೈತರ ಜಮೀನುಗಳಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಬರ ಅಧ್ಯಯನ ನಡೆಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಣೆ ಮಾಡಿ ಎರಡ್ಮೂರು ತಿಂಗಳಾದರೂ ಇದುವರೆಗೂ ರೈತರಿಗೆ ನೈಯಾಪೈಸೆ ಬರ ಪರಿಹಾರ ನೀಡಲು ಆಗುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರೈತರಿಗೆ ಎಲ್ಲಿಂದ ಪರಿಹಾರ ನೀಡುತ್ತಾರೆ? ಇಂತಹ ಭ್ರಷ್ಟ ಸರ್ಕಾರ ಬಹಳ ದಿನ ರಾಜ್ಯದಲ್ಲಿ ಉಳಿಯುವುದಿಲ್ಲ ಎಂದರು.

ಕಾಂಗ್ರೆಸ್ ನಾಯಕರೇ ಕೇಂದ್ರದ ಕಡೆ ಬೆಟ್ಟು ಮಾಡುವುದನ್ನು ಬಿಡಿ: ಕೆ.ಎಸ್.ಈಶ್ವರಪ್ಪ

ವಿದ್ಯುತ್ ಕೊರತೆಯಿಂದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊಳವೆಬಾವಿಗೆ ಮೋಟಾರ್ ಅಳವಡಿಸಲು ರೈತರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ವಹಿಸಿಕೊಳ್ಳಬೇಕು ಎನ್ನುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ರೈತ ಹಿತ ಕಾಪಾಡಬೇಕಾದ ಸರ್ಕಾರ ಜನರಿಗೆ ಇನ್ನಿಲ್ಲದ ಸಮಸ್ಯೆಗಳನ್ನು ಸೃಷ್ಟಿಸಿ ರೈತರು ಸಾಲ-ಸೋಲಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಹೀನಾಯ ಸ್ಥಿತಿಗೆ ತಲುಪಲು ಸರ್ಕಾರದ ಆಡಳಿತ ವೈಖರಿಯೇ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಹುಚ್ಚುದೊರೆ ಆಡಳಿತ: ಕೆ.ಎಸ್. ಈಶ್ವರಪ್ಪ

ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ಕಾಂಗ್ರೆಸ್ ಆಡಳಿತಕ್ಕೆ ಬಂದು ನಾಲ್ಕೈದು ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಜನರ ಸಮಸ್ಯೆಗಳನ್ನು ಆಲಿಸುವವರಿಲ್ಲ. ಈ ಸರ್ಕಾರ ಕೇವಲ ವರ್ಗಾವಣೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದ ಜನರ ಸಂಕಷ್ಟಕ್ಕೆ ಕಿಂಚತ್ತೂ ಸ್ಪಂದಿಸುತ್ತಿಲ್ಲ ಎಂದರು.

ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಬಸವರಾಜ ದಢೇಸುಗೂರು, ಮುಖಂಡರಾದ ಶಿವಪ್ಪ ವಾದಿ, ವಿಶ್ವನಾಥ ಮರಿಬಸಪ್ಪನವರ್, ಅಯ್ಯನಗೌಡ ಕೆಂಚಮ್ಮನವರ್, ರಾಚಪ್ಪ ಹುರಳಿ, ಫಕೀರಪ್ಪ ತಳವಾರ್, ಹನುಮರಡ್ಡಿ, ಆನಂದ ಈಳಿಗೇರ್, ಶಂಕರ ಮೂಲಿ, ಅಮರೇಶ ಹುಬ್ಬಳ್ಳಿ, ಭೀಮಜ್ಜ ಮುರಡಿ, ಭೀಮೇಶ ಕರಡಿ, ರಾಮನಗೌಡ ಇದ್ದರು.

Follow Us:
Download App:
  • android
  • ios