ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಅವರು ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ಆತ್ಮ*ಹತ್ಯೆ ಮಾಡಿಕೊಂಡಿರುವ ಮಾಜಿ ಶಾಸಕರ ಪುತ್ರ. ಸುದೀಪ್ ಅವರು ಹೆಬ್ರಿ ತಾಲೂಕು ನಿವಾಸಿಯಾಗಿದ್ದಾರೆ. ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ಆರ್‌ಎಸ್‌ಎಸ್‌ ದೇಶ ಹಾಳು ಮಾಡಿಲ್ಲ: ಪ್ರಿಯಾಂಕ್ ಖರ್ಗೆಗೆ ಪ್ರಮೋದ್ ಮುತಾಲಿಕ್ ತಿರುಗೇಟು

ಎರಡು ಬಾರಿ ಶಾಸಕರಾಗಿದ್ರು ಗೋಪಾಲ್ ಭಂಡಾರಿ

ಸುದೀಪ್ ತಂದೆ ಹೆಚ್.ಗೋಪಾಲ್ ಭಂಡಾರಿ ಅವರು 1999ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ನಂತರ 2008ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ. ಹೆಚ್.ಗೋಪಾಲ್ ಭಂಡಾರಿ ಅವರು ಕಾಂಗ್ರೆಸ್‌ ನಲ್ಲಿ ಗುರುತಿಸಿಕೊಂಡಿದ್ದರು. ಗೋಪಾಲ್ ಭಂಡಾರಿ ಅವರಿಗಿಂತ ಮುಂಚೆ ಈ ಕ್ಷೇತ್ರವನ್ನು ವೀರಪ್ಪ ಮೊಯ್ಲಿ ಪ್ರತಿನಿಧಿಸುತ್ತಿದ್ದರು. ಸದ್ಯ ಬಿಜೆಪಿಯ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 

ಇದನ್ನೂ ಓದಿ: ಮಂತ್ರಿಯಾಗುವ ಅವಕಾಶವಿತ್ತು, ಪಕ್ಷಕ್ಕಾಗಿ ತ್ಯಾಗ ಮಾಡಿ ಲೋಕಸಭೆಗೆ ಸ್ಪರ್ಧಿಸಿದೆ: ಸಂಸದ ತುಕಾರಾಂ