* ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ನಡೆದ ಘಟನೆ* ಸಿಎಂ ಬೆಂಗಾವಲು ವಾಹನಕ್ಕೆ ಗುದ್ದಿದ ಶಿವರಾಮ್ ಹೆಬ್ಬಾರ್ ಕಾರು * ಹೆಬ್ಬಾರ್ ಅವರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ
ಹುಬ್ಬಳ್ಳಿ(ಜು.29): ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಕಾರು ಆಪಘಾತವಾದ ಘಟನೆ ನಗರದ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಘಟನೆ ಇಂದು(ಗುರುವಾರ) ನಡೆದಿದೆ.
Add Asianetnews Kannada as a Preferred Source

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಶಿವರಾಮ್ ಹೆಬ್ಬಾರ್ ಅವರು ಕಾರು ಗುದ್ದಿದೆ. ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಆಪಘಾತ ನಡೆದಿದೆ.
ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಅಪಘಾತ: ಮೂವರ ದುರ್ಮರಣ
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಬಸವರಾಜ ಬೊಮ್ಮಾಯಿ ಹೊರ ಹೋಗುವ ವೇಳೆ ಈ ಘಟನೆ ಸಂಭವಿಸಿದೆ. ಸಿಎಂ ಕಾರಿನಲ್ಲಿ ಶಿವರಾಮ ಹೆಬ್ಬಾರ ಇದ್ದರು. ಶಿವರಾಮ್ ಹೆಬ್ಬಾರ್ ಅವರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
