Asianet Suvarna News Asianet Suvarna News

'ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ'

ಗೌಡ, ಎಚ್‌ಡಿಕೆ ದೇಹ ಬಂಗಾರದ್ದು, ಕಿವಿ ಹಿತ್ತಾಳೆ| ಎಚ್. ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ

Former MP LR Shivarame Gowda Slams HD Deve Gowda And Kumaraswamy
Author
Bangalore, First Published Sep 22, 2019, 8:45 AM IST

ನಾಗಮಂಗಲ[ಸೆ.22]: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ತೀವ್ರ ಅಸಮಾಧಾನ ಹೊರಹಾಕಿದ್ದು, ಇಬ್ಬರ ದೇಹ ಬಂಗಾರದ್ದು, ಆದರೆ ಕಿವಿ ಮಾತ್ರ ಹಿತ್ತಾಳೆ ಎಂದಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರೂ ನಾಯಕರು ಹೇಳಿಕೆ ಮಾತುಗಳನ್ನು ಮಾತ್ರ ಕೇಳುತ್ತಾರೆ. ಹಿತ್ತಾಳೆ ಕಿವಿ ಇರುವುದರಿಂದ ಚಾಡಿಕೋರರ ಮಾತುಗಳಿಗೆ ಹೆಚ್ಚಿನ ಬೆಲೆ. ಸತ್ಯಕ್ಕೆ ಬೆಲೆ ಕೊಡುವುದಿಲ್ಲ ಎಂದು ದೂರಿದರು. ನಾನು ಯಾವುದೇ ಕಾರಣಕ್ಕೂ ಜೆಡಿಎಸ್‌ ಬಿಡುವುದಿಲ್ಲ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಡೀ ಒಕ್ಕಲಿಗರ ನಾಯಕರನ್ನು ತಯಾರು ಮಾಡಿದ್ದೇ ದೇವೇಗೌಡರು ಹಾಗೂ ಕುಮಾರಸ್ವಾಮಿ. ಆದರೆ, ಇವರ ದ್ವಂದ್ವ ನೀತಿ ಹಾಗೂ ನಿರ್ಧಾರಗಳು ಪಕ್ಷದ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ನಾನು ಯಾವುದೇ ಕಾರಣಕ್ಕೂ ಜೆಡಿಎಸ್‌ ಬಿಡುವುದಿಲ್ಲ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ದೇವೇಗೌಡರ ಜತೆ ಇದ್ದುಕೊಂಡು ಪಕ್ಷ ಕಟ್ಟುತ್ತೇನೆ. ನಿಖಿಲ್‌ ಸೋಲಿಗೆ ಜೆಡಿಎಸ್‌ ಮುಖಂಡರು ಕಾರಣರಲ್ಲ. ಸುಮಲತಾ ಜಯದ ಹಿಂದೆ ಮತದಾರರ ತೀರ್ಮಾನವಿತ್ತು. ಜನ ಬದಲಾವಣೆ ಬಯಸಿದ್ದರು ಎಂದರು.

Follow Us:
Download App:
  • android
  • ios