ನಾನು ವೈಯಕ್ತಿಕವಾಗಿ ಯಾರನ್ನೂ ಅನರ್ಹಗೊಳಿಸಿಲ್ಲ ಎಂದ ರಮೇಶ್ ಕುಮಾರ್|ಚುನಾವಣೆಯಲ್ಲಿ ಹಣ ಕೊಡುವ ಮತ್ತು ಪಡೆಯುವ ರಾಜಕಾರಣ ನನಗೆ ಗೊತ್ತಿಲ್ಲ|ಉಪಚುನಾವಣೆ ಫಲಿತಾಂಶವನ್ನು ಕಾಂಗ್ರೆಸ್ ಧೈರ್ಯದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸುತ್ತದೆ|

ಕೋಲಾರ(ಡಿ.09): ಸಂವಿಧಾನವನ್ನ ಅನರ್ಹಗೊಳಿಸಿರುವ ತೀರ್ಪು ಎಂಬುದು ಹೆಬ್ಬಾರ್ ಅವರ ಅಭಿಪ್ರಾಯ ಇರಬಹುದು. ನಾನು ವೈಯಕ್ತಿಕವಾಗಿ ಯಾರನ್ನೂ ಅನರ್ಹಗೊಳಿಸಿಲ್ಲ. ಉಪಚುನಾವಣೆಯಲ್ಲಿ ಜನರ ತೀರ್ಪನ್ನ ಗೌರವಿಸುತ್ತೇವೆ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಯಲ್ಲಾಪುರ ಕ್ಷೇತ್ರದ ಬಿಜೆಪಿ ವಿಜೇತ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಸೋಮವಾರ ಶ್ರೀನಿವಾಸಪುರದ ಅಡ್ಡಗಲ್‌ನ ತಮ್ಮ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್ ಅವರು, ಉಪಚುನಾವಣೆ ಫಲಿತಾಂಶವನ್ನು ಕಾಂಗ್ರೆಸ್ ಧೈರ್ಯದಿಂದ ಮತ್ತು ಸಮಚಿತ್ತದಿಂದ ಸ್ವೀಕರಿಸುತ್ತದೆ ಎಂದು ಹೇಳಿದ್ದಾರೆ. 

LIVE: ಮುಕ್ತಾಯದ ಹಂತಕ್ಕೆ ಮತ ಎಣಿಕೆ, 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧ್ಯತೆ

ಚುನಾವಣೆಯಲ್ಲಿ ಹಣ ಕೊಡುವ ಮತ್ತು ಪಡೆಯುವ ರಾಜಕಾರಣ ನನಗೆ ಗೊತ್ತಿಲ್ಲ. ಎಂದು ಹೇಳುವ ಫಲಿತಾಂಶದ ನಂತರ ಬೇಸರದಿಂದಲೇ ಸ್ವಗ್ರಾಮದಿಂದ ಬೆಂಗಳೂರಿನ ಕಡೆ ರಮೇಶ್ ಕುಮಾರ್ ಪ್ರಯಾಣ ಬೆಳೆಸಿದ್ದಾರೆ. 

ಈ ಉಪಚುನಾವಣೆಯ ಫಲಿತಾಂಶ ಬಹತೇಕ ಹೊರಬಿದ್ದಿದ್ದು ಬಿಜೆಪಿ 12 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿದರೆ, ಕಾಂಗ್ರೆಸ್ ಕೇವಲ 2 ಕ್ಷೇತ್ರಗಳಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ಸಫಲವಾಗಿದೆ. ಇನ್ನು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಆದರೆ, ಜೆಡಿಎಸ್ ಮಾತ್ರ ಒಂದೂ ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ.