ದಂಪತಿಯ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದ್ದ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿ, (ಏ.04): ನೀರಿನ ಹೊಂಡದಲ್ಲಿ ಬಿದ್ದು ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಜನಕಟ್ಟಿ ಗ್ರಾಮದಲ್ಲಿ ನಡೆದಿದೆ. 

ಭಾಗವ್ವಾ ಜಕ್ಕನ್ನವರ(6), ತಾಯಮ್ಮ(5), ಮಾಳಪ್ಪ ಜಕ್ಕನ್ನವರ(4) ಮತ್ತು 3 ವರ್ಷದ ರಾಜಶ್ರೀ ಜಕ್ಕನ್ನವರ ಮೃತ ಮಕ್ಕಳು.

ಅನವಶ್ಯಕವಾಗಿ ರೋಡಿಗಿಳಿದರೆ ಕೇಸ್, ಬಿಸಿ ಏರಿಸುತ್ತಿದೆ ಸನ್ನಿ ಲಿಯೋನ್ ಕಿಸ್; ಏ.4ರ ಟಾಪ್ 10 ಸುದ್ದಿ!

ಕರೆಪ್ಪ ಜಕ್ಕನ್ನವರ ದಂಪತಿಯ ನಾಲ್ವರು ಮಕ್ಕಳು ಇಂದು (ಶನಿವಾರ) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred