Asianet Suvarna News Asianet Suvarna News

ಹುಬ್ಬಳ್ಳಿ: ನಿವೇಶನ ನೀಡೋದಾಗಿ ನಂಬಿಸಿ ವಂಚನೆ, ನಾಲ್ವರ ಬಂಧನ

ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರ ಬಂಧನ| ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ| ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು|

Four People Arrest for Fraud Case in Hubballi
Author
Bengaluru, First Published Dec 22, 2019, 12:02 PM IST

ಹುಬ್ಬಳ್ಳಿ(ಡಿ.22): ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಹುಬ್ಬಳ್ಳಿ-ಧಾರವಾಡದ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ, ಮಲ್ಲಿಕಾರ್ಜುನ ಸೇರಿದಂತೆ ನಾಲ್ವರನ್ನ ಬಂಧಿಸಲಾಗಿದೆ. 

ನಗರದ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ. ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.  ಬಂಧಿತರಲ್ಲಿ ಓರ್ನ ನಕಲಿ ಪತ್ರಕರ್ತ ಕೂಡ ಇದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

Follow Us:
Download App:
  • android
  • ios