ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರ ಬಂಧನ| ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ| ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು|

ಹುಬ್ಬಳ್ಳಿ(ಡಿ.22): ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಹುಬ್ಬಳ್ಳಿ-ಧಾರವಾಡದ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ, ಮಲ್ಲಿಕಾರ್ಜುನ ಸೇರಿದಂತೆ ನಾಲ್ವರನ್ನ ಬಂಧಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ. ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪ ಕೇಳಿಬಂದಿದೆ. ಬಂಧಿತರಲ್ಲಿ ಓರ್ನ ನಕಲಿ ಪತ್ರಕರ್ತ ಕೂಡ ಇದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.