ಪ್ರತಿಷ್ಠಾಪನೆ ಮಾಡಿದ್ದ ಗಣೇಶಮೂರ್ತಿಯೇ ಕಳುವು
- ಮಕ್ಕಳು ಪ್ರತಿಷ್ಠಾಪನೆ ಮಾಡಿದ್ದ ಗಣೇಶಮೂರ್ತಿಯೇ ಕಳುವು
- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಘಟನೆ
ಮಂಡ್ಯ (ಸೆ.12): ಮಕ್ಕಳು ಪ್ರತಿಷ್ಠಾಪಿಸಿದ್ದ ಗೌರಿ, ಗಣೇಶ ಮೂರ್ತಿ ಕಳವಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ ಪ್ರತಿಷ್ಟಾಪಿಸಿದ್ದ ಗಣಪನ ಮೂರ್ತಿಯನ್ನು ಇಂದು ಮುಂಜಾನೆ ಸಮಯದಲ್ಲಿ ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ.
ಕೊಪ್ಪಳ: ಇಲ್ಲಿ ಇಲಿಗೂ ಸಲ್ಲುತ್ತೆ ಪೂಜೆ..!
ಗಣಪನ ಮೂರ್ತಿ ಕಳವಿನಿಂದ ಮಕ್ಕಳು ಮಹಿಳೆಯರು ಹಾಗು ಇಲ್ಲಿನ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಗಣೇಶ ಹಬ್ಬದ ನಿಮಿತ್ತ ಪ್ರತಿಷ್ಠಾಪಿಸಿದ್ದ ಮೂರ್ತಿ ಕಳುವಾಗಿದ್ದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.