ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಪತ್ತೆ| ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣ| ಅಪರಿಚಿತ ವ್ಯಕ್ತಿಯ ಬಗ್ಗೆ ವೈದ್ಯರು, ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು| 

ಗಂಗಾವತಿ(ಮೇ.06): ನಗರದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವನು ಪತ್ತೆಯಾಗಿದ್ದು, ಗಂಟಲು ದ್ರವ ಪರೀಕ್ಷೆಗೆ ವೈದ್ಯರು ದಾಖಲಿಸಿಕೊಂಡಿದ್ದಾರೆ. ಈ ವ್ಯಕ್ತಿಯ ಆಗಮನದಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Add Asianetnews Kannada as a Preferred SourcegooglePreferred

ಈತ ಬಸ್ ನಿಲ್ದಾಣದಲ್ಲಿ ಮಲಗಿಕೊಂಡಿರುವುದಕ್ಕೆ ಕೊರೋನಾ ವೈರಸ್ ಶಂಕೆಯ ಅನುಮಾನ ವ್ಯಕ್ತಪಡಿಸಿದ ಬಸ್ ನಿಲ್ದಾಣದ ಸಿಬ್ಬಂದಿಗಳು ಕೂಡಲೇ ವೈದ್ದರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವೈದ್ಯರು, ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದಾಗ ಅ ವ್ಯಕ್ತಿ ಮಂಗಳೂರು ನಗರದವನಾಗಿದ್ದು, ಮಂಜುನಾಥ ಎಂದು ಹೇಳಿದ್ದಾನೆ. ಈ ವ್ಯಕ್ತಿಗೆ 35 ವರ್ಷದವನಾಗಿದ್ದು, ಅನಾರೋಗ್ಯಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ. 

ಆರೋಗ್ಯ ತಪಾಸಣೆಗೆ ಮುಗಿಬಿದ್ದ ಬಿದ್ದ ಜನತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ಮಂಗಳೂರು, ಧಾರವಾಡ, ಹುಬ್ಬಳ್ಳಿ, ಕುಷ್ಟಗಿ ಮೂಲಕ ಗಂಗಾವತಿ ನಗರಕ್ಕೆ ಆಗಮಿಸಿದ್ದ ಈತ ಇಡಿ ರಾತ್ರಿ ಪೋಲಿಸ್ ಠಾಣೆಯಲ್ಲಿ ಸಮಯ ಕಳೆದಿದ್ದು, ಪೊಲೀಸರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ಹಿಗಾಗಿ ಡಾ.ಗುರುರಾಜ್ ಅವರು ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.